‘ನಾವು ಯಾವುದೇ ಬೇಡಿಕೆ ಇಟ್ಟಿಲ್ಲ. ಅಲ್ಲಿ ಪಕ್ಷ ಸಮೀಕ್ಷೆ ಮಾಡಿ ಯಾರು ಗೆಲ್ಲುತ್ತಾರೆ ಅನ್ನುವುದನ್ನು ನೋಡಿಕೊಂಡು ಟಿಕೆಟ್ ನೀಡಲಿ. ಯಾರಿಗೇ ಟಿಕೆಟ್ ನೀಡಿದರೂ ಗೆಲ್ಲಿಸಿಕೊಂಡು ಬರುವ ಕೆಲಸ ಮಾಡುತ್ತೇವೆ. ಅಲ್ಲದೇ, ಆ ಕ್ಷೇತ್ರದಲ್ಲಿ ಯಾರೇ ಶಾಸಕನಾದರೂ, ಯಾರೇ ಮಂತ್ರಿ ಆದರೂ ಆ ಕ್ಷೇತ್ರದ ಜನತೆಯ ಜೊತೆಗೆ ಅವಿನಾಭಾವ ಸಂಬಂಧ ಇದೆ. ನಾನು ಆ ಕ್ಷೇತ್ರದ ಪ್ರತಿ ಮನೆಯ ಅಣ್ಣ, ತಮ್ಮ, ಮಗ ಆಗಿದ್ದೇನೆ. ಹೀಗಾಗಿ ಆ ಕ್ಷೇತ್ರದ ಜೊತೆಗೆ ಯಾವಾಗಲೂ ಇರುತ್ತೇನೆ’ ಎಂದು ಹೇಳಿದರು.