‘ಭ್ರದಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹5,300 ಕೋಟಿ ಅನುದಾನ ಘೋಷಣೆ ಮಾಡಿತ್ತು. ಅದನ್ನು ಹೇಗೆ ಪಡೆಯಬೇಕು ಎನ್ನುವ ಬಗ್ಗೆ ಚರ್ಚೆ ಮಾಡೋಣ. 16ನೇ ಹಣಕಾಸು ಆಯೋಗ ಬರುತ್ತಿದೆ. ಅದರಲ್ಲಿ ನಮಗೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕು ಅಷ್ಟೇ. ರಾಜ್ಯಕ್ಕೆ ಅನುದಾನ ತರುವ ನಿಟ್ಟಿನಲ್ಲಿ ಆಡಳಿತ ಪಕ್ಷಕ್ಕೆ ಎಷ್ಟು ಜವಾಬ್ದಾರಿ ಇದೆಯೋ ನಮಗೂ ಅಷ್ಟೇ ಜವಾಬ್ದಾರಿ ಇದೆ. ಇಬ್ಬರೂ ಸೇರಿ ರಾಜ್ಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡೋಣ’ ಎಂದು ಹೇಳಿದರು.