<p><strong>ಬೆಳಗಾವಿ:</strong> ಕೃಷ್ಣಾ ಮೇಲ್ದಂಡೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅಧಿಸೂಚನೆ ಆದಷ್ಟು ಶೀಘ್ರ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ವಿಧಾನಸಭೆಯಲ್ಲಿ ಬುಧವಾರ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಕುರಿತ ಚರ್ಚೆಯಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ನಲ್ಲಿ ಕೃಷ್ಣಾ ನದಿ ನೀರಿನ ತಕರಾರು ಕುರಿತು ವಿಚಾರಣೆ ನಡೆಯುತ್ತಿದ್ದು, ಮುಂದಿನ ವಿಚಾರಣೆ ಜನವರಿ 10 ಕ್ಕೆ ನಿಗದಿಯಾಗಿದೆ ಎಂದು ಅವರು ತಿಳಿಸಿದರು.</p>.<p>ಅಧಿಸೂಚನೆಯನ್ನು ಪ್ರಕಟಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಮತ್ತು ಮಹಾರಾಷ್ಟ್ರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿವೆ. ಸ್ಪಷ್ಟನೆ ನೀಡಲು ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೂ ಸೂಚಿಸಿದೆ ಎಂದರು.</p>.<p>ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನುತೆಲಂಗಾಣ ಹಿಂದಕ್ಕೆ ಪಡೆದಿದೆ. ಇದರಿಂದ ರಾಜ್ಯದ ಹಾದಿ ಸುಗಮವಾಗಿದೆ. ಕೇಂದ್ರವು ಆದಷ್ಟು ಬೇಗ ಸುಪ್ರೀಂಕೋರ್ಟ್ನಲ್ಲಿ ತನ್ನ ನಿಲುವು ಪ್ರಕಟಿಸಲಿದೆ ಎಂದೂ ಹೇಳಿದರು.</p>.<p>ಕಳಸಾ ಮತ್ತು ಬಂಡೂರಿ ಕುಡಿಯುವ ನೀರು ಪೂರೈಕೆ ಯೋಜನೆಗೆ 7.50 ಟಿಎಂಸಿ ಅಡಿ ನೀರಿನ ಅಗತ್ಯವಿದ್ದು, ಸದ್ಯಕ್ಕೆ 3.90 ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ. ಸುಪ್ರೀಂಕೋರ್ಟ್ನಲ್ಲಿ ಈ ಕುರಿತು ವ್ಯಾಜ್ಯ ಇದ್ದರೂ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ನೀಡಿದೆ. ಆದರೆ, 3.90 ಟಿಎಂಸಿ ಅಡಿ ಅಥವಾ 7.50 ಟಿಎಂಸಿ ಅಡಿ ನೀರಿನ ಬಳಕೆಗೆ ಯೋಜನೆ (ಡಿಪಿಎಆರ್) ರೂಪಿಸಬೇಕೋ ಎಂಬ ಗೊಂದಲ ನಿವಾರಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ಬೇಕಾಯಿತು. ಈಗ ಆ ಗೊಂದಲ ನಿವಾರಣೆಯಾಗಿದ್ದು, ಪರಿಷ್ಕೃತ ವಿಸ್ತೃತ ಯೋಜನಾ ವರದಿ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪರಿಸರ ಇಲಾಖೆಯ ಒಪ್ಪಿಗೆ ಸಿಗುವ ನಿರೀಕ್ಷೆಯಲ್ಲಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕೃಷ್ಣಾ ಮೇಲ್ದಂಡೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅಧಿಸೂಚನೆ ಆದಷ್ಟು ಶೀಘ್ರ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ವಿಧಾನಸಭೆಯಲ್ಲಿ ಬುಧವಾರ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಕುರಿತ ಚರ್ಚೆಯಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ನಲ್ಲಿ ಕೃಷ್ಣಾ ನದಿ ನೀರಿನ ತಕರಾರು ಕುರಿತು ವಿಚಾರಣೆ ನಡೆಯುತ್ತಿದ್ದು, ಮುಂದಿನ ವಿಚಾರಣೆ ಜನವರಿ 10 ಕ್ಕೆ ನಿಗದಿಯಾಗಿದೆ ಎಂದು ಅವರು ತಿಳಿಸಿದರು.</p>.<p>ಅಧಿಸೂಚನೆಯನ್ನು ಪ್ರಕಟಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ಕೋರಿ ಕರ್ನಾಟಕ ಮತ್ತು ಮಹಾರಾಷ್ಟ್ರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿವೆ. ಸ್ಪಷ್ಟನೆ ನೀಡಲು ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೂ ಸೂಚಿಸಿದೆ ಎಂದರು.</p>.<p>ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನುತೆಲಂಗಾಣ ಹಿಂದಕ್ಕೆ ಪಡೆದಿದೆ. ಇದರಿಂದ ರಾಜ್ಯದ ಹಾದಿ ಸುಗಮವಾಗಿದೆ. ಕೇಂದ್ರವು ಆದಷ್ಟು ಬೇಗ ಸುಪ್ರೀಂಕೋರ್ಟ್ನಲ್ಲಿ ತನ್ನ ನಿಲುವು ಪ್ರಕಟಿಸಲಿದೆ ಎಂದೂ ಹೇಳಿದರು.</p>.<p>ಕಳಸಾ ಮತ್ತು ಬಂಡೂರಿ ಕುಡಿಯುವ ನೀರು ಪೂರೈಕೆ ಯೋಜನೆಗೆ 7.50 ಟಿಎಂಸಿ ಅಡಿ ನೀರಿನ ಅಗತ್ಯವಿದ್ದು, ಸದ್ಯಕ್ಕೆ 3.90 ಟಿಎಂಸಿ ಅಡಿ ನೀರು ಹಂಚಿಕೆಯಾಗಿದೆ. ಸುಪ್ರೀಂಕೋರ್ಟ್ನಲ್ಲಿ ಈ ಕುರಿತು ವ್ಯಾಜ್ಯ ಇದ್ದರೂ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ನೀಡಿದೆ. ಆದರೆ, 3.90 ಟಿಎಂಸಿ ಅಡಿ ಅಥವಾ 7.50 ಟಿಎಂಸಿ ಅಡಿ ನೀರಿನ ಬಳಕೆಗೆ ಯೋಜನೆ (ಡಿಪಿಎಆರ್) ರೂಪಿಸಬೇಕೋ ಎಂಬ ಗೊಂದಲ ನಿವಾರಿಸಿಕೊಳ್ಳಲು ಸ್ವಲ್ಪ ಕಾಲಾವಕಾಶ ಬೇಕಾಯಿತು. ಈಗ ಆ ಗೊಂದಲ ನಿವಾರಣೆಯಾಗಿದ್ದು, ಪರಿಷ್ಕೃತ ವಿಸ್ತೃತ ಯೋಜನಾ ವರದಿ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪರಿಸರ ಇಲಾಖೆಯ ಒಪ್ಪಿಗೆ ಸಿಗುವ ನಿರೀಕ್ಷೆಯಲ್ಲಿದ್ದೇವೆ ಎಂದು ಬೊಮ್ಮಾಯಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>