<p><strong>ಬೆಂಗಳೂರು: ‘</strong>ನರೇಗಾ ಯೋಜನೆಯಲ್ಲಿ ಕುಟುಂಬವೊಂದಕ್ಕೆ 100 ದಿನ ಕೂಲಿ ಒದಗಿಸಲಾಗುತ್ತಿತ್ತು. ಅದನ್ನು ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ 125 ದಿನಕ್ಕೆ ಹೆಚ್ಚಿಸಲಾಗಿದೆ. ಆದರೆ, ಕಾಂಗ್ರೆಸ್ ಈ ಬಗ್ಗೆ ಸುಳ್ಳು ಹೇಳುತ್ತಿದೆ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ವಿಬಿ ಜಿ ರಾಮ್ ಜಿ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ನ ಪ್ರತಿಭಟನೆ ಕುರಿತು ‘ಎಕ್ಸ್’ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.</p>.<p>‘ನೂತನ ಯೋಜನೆಯ ಅನುಷ್ಠಾನದಲ್ಲಿ ಕೇಂದ್ರ ಸರ್ಕಾರವೇ ಹಚ್ಚಿನ ವೆಚ್ಚ ಭರಿಸುತ್ತದೆ. ನರೇಗಾದಲ್ಲಿ ಇದ್ದ ಭ್ರಷ್ಟಾಚಾರವನ್ನು ಇದು ತಡೆಯುತ್ತದೆ ಮತ್ತು ನೈಜ ಕೆಲಸಗಾರರಿಗೆ ಹಣ ನೇರವಾಗಿ ತಲುಪುತ್ತದೆ. ಮಧ್ಯವರ್ತಿಗಳ ಹಾವಳಿಗೆ ತಡೆಯೊಡ್ಡುತ್ತದೆ. ಇದನ್ನು ಸಾಧ್ಯವಾಗಿಸುತ್ತಿರುವುದು ತಪ್ಪೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರ ಎಲ್ಲ ಸುಧಾರಣಾ ಕ್ರಮಗಳನ್ನು ಕಾಂಗ್ರೆಸ್ ವಿರೋಧಿಸುತ್ತಲೇ ಬಂದಿದೆ. ವಿಬಿ ಜಿ ರಾಮ್ ಜಿ ಯೋಜನೆಯ ಅನುಕೂಲಗಳನ್ನು ಮುಚ್ಚಿಟ್ಟು, ಸುಳ್ಳು ಹೇಳುವುದನ್ನು ಕಾಂಗ್ರೆಸ್ ನಿಲ್ಲಿಸಲಿ’ ಎಂದಿದ್ದಾರೆ.</p>.<div><blockquote>ಸತ್ಯವನ್ನು ಮರೆಮಾಚುವ ಮತ್ತು ಸುಳ್ಳನ್ನು ಪ್ರಚಾರ ಮಾಡುವ ಕಾಂಗ್ರೆಸ್ ಕುತಂತ್ರದ ವಿರುದ್ಧ ನಮ್ಮಹೋರಾಟ ನಿರಂತರವಾಗಿ ನಡೆಯುತ್ತದೆ </blockquote><span class="attribution">ಬಸವರಾಜ ಬೊಮ್ಮಾಯಿ ಬಿಜೆಪಿ ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ನರೇಗಾ ಯೋಜನೆಯಲ್ಲಿ ಕುಟುಂಬವೊಂದಕ್ಕೆ 100 ದಿನ ಕೂಲಿ ಒದಗಿಸಲಾಗುತ್ತಿತ್ತು. ಅದನ್ನು ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ 125 ದಿನಕ್ಕೆ ಹೆಚ್ಚಿಸಲಾಗಿದೆ. ಆದರೆ, ಕಾಂಗ್ರೆಸ್ ಈ ಬಗ್ಗೆ ಸುಳ್ಳು ಹೇಳುತ್ತಿದೆ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.</p>.<p>ವಿಬಿ ಜಿ ರಾಮ್ ಜಿ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ನ ಪ್ರತಿಭಟನೆ ಕುರಿತು ‘ಎಕ್ಸ್’ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.</p>.<p>‘ನೂತನ ಯೋಜನೆಯ ಅನುಷ್ಠಾನದಲ್ಲಿ ಕೇಂದ್ರ ಸರ್ಕಾರವೇ ಹಚ್ಚಿನ ವೆಚ್ಚ ಭರಿಸುತ್ತದೆ. ನರೇಗಾದಲ್ಲಿ ಇದ್ದ ಭ್ರಷ್ಟಾಚಾರವನ್ನು ಇದು ತಡೆಯುತ್ತದೆ ಮತ್ತು ನೈಜ ಕೆಲಸಗಾರರಿಗೆ ಹಣ ನೇರವಾಗಿ ತಲುಪುತ್ತದೆ. ಮಧ್ಯವರ್ತಿಗಳ ಹಾವಳಿಗೆ ತಡೆಯೊಡ್ಡುತ್ತದೆ. ಇದನ್ನು ಸಾಧ್ಯವಾಗಿಸುತ್ತಿರುವುದು ತಪ್ಪೇ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರ ಎಲ್ಲ ಸುಧಾರಣಾ ಕ್ರಮಗಳನ್ನು ಕಾಂಗ್ರೆಸ್ ವಿರೋಧಿಸುತ್ತಲೇ ಬಂದಿದೆ. ವಿಬಿ ಜಿ ರಾಮ್ ಜಿ ಯೋಜನೆಯ ಅನುಕೂಲಗಳನ್ನು ಮುಚ್ಚಿಟ್ಟು, ಸುಳ್ಳು ಹೇಳುವುದನ್ನು ಕಾಂಗ್ರೆಸ್ ನಿಲ್ಲಿಸಲಿ’ ಎಂದಿದ್ದಾರೆ.</p>.<div><blockquote>ಸತ್ಯವನ್ನು ಮರೆಮಾಚುವ ಮತ್ತು ಸುಳ್ಳನ್ನು ಪ್ರಚಾರ ಮಾಡುವ ಕಾಂಗ್ರೆಸ್ ಕುತಂತ್ರದ ವಿರುದ್ಧ ನಮ್ಮಹೋರಾಟ ನಿರಂತರವಾಗಿ ನಡೆಯುತ್ತದೆ </blockquote><span class="attribution">ಬಸವರಾಜ ಬೊಮ್ಮಾಯಿ ಬಿಜೆಪಿ ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>