‘ಬೆಳಗಾವಿ ಅಧಿವೇಶನವನ್ನು ದೂರುಗಳಿಲ್ಲದೇ ನಡೆಸಿದ್ದೇನೆ. ವಿಧಾನಪರಿಷತ್ ಸಿಬ್ಬಂದಿಗೆ ಸಮವಸ್ತ್ರ, ಬಯೋ ಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯ ಮಾಡಿದ್ದೇವೆ. ನನ್ನನ್ನು ಮೇಲ್ಮನೆಗೆ ಗೆಲ್ಲಿಸಿ ಕಳುಹಿಸುತ್ತಿದ್ದ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಒಟ್ಟು ಏಳು ಬಾರಿ ಪರಿಷತ್ತಿಗೆ ಆಯ್ಕೆಯಾಗಿ ಬಂದಿದ್ದು, ಎರಡು ತಲೆಮಾರಿನ ಜನ ನನಗೆ ಮತ ಹಾಕಿದ್ದಾರೆ’ ಎಂದು ಹೇಳಿದರು.