<p><strong>ಬೆಂಗಳೂರು</strong>: ಸಿಎಂ ಸಿದ್ದರಾಮಯ್ಯ ಅವರು ಯಾವ ಪರಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎನ್ನುವುದಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರ ಇತ್ತೀಚಿನ ಹೇಳಿಕೆಯೇ ಸಾಕ್ಷಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.</p><p>ಈ ಕುರಿತು ರಾಯರೆಡ್ಡಿ ಅವರ ಹೇಳಿಕೆ ವಿಡಿಯೊ ಹಂಚಿಕೊಂಡು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ‘ಅಕ್ಕಿ ಬೇಕು ಎಂದರೆ, ರಸ್ತೆ ಇಲ್ಲ. ರಸ್ತೆ ಬೇಕು ಎಂದರೆ, ಅಕ್ಕಿ ಇಲ್ಲವೆಂದು ಹೇಳುತ್ತಾರೆ ಎಂದರೆ ಇದು ದಿವಾಳಿತನಕ್ಕೆ ಸಾಕ್ಷಿ’ ಎಂದು ಹೇಳಿದೆ.</p><p>‘ಇದುವೇ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರಂಟಿಯ ಅಸಲಿಯತ್ತು. ಸ್ವಯಂ ಘೋಷಿತ ಭ್ರಷ್ಟ ಆರ್ಥಿಕ ತಜ್ಞ ಸಿದ್ದರಾಮಯ್ಯ ಅವರು ಯಾವ ಪರಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎನ್ನುವುದಕ್ಕೆ ಇದು ತಾಜಾ ಉದಾಹರಣೆ’ ಎಂದು ಆರೋಪಿಸಿದೆ.</p><p>‘ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರು ಜನರಿಗೆ ಆಯ್ಕೆಗಳನ್ನು ನೀಡುವ ಮೂಲಕ ಸರ್ಕಾರದ ದಿವಾಳಿತನವನ್ನು ಬಟಾ ಬಯಲು ಮಾಡಿದ್ದಾರೆ’ ಎಂದು ಲೇವಡಿ ಮಾಡಿದೆ.</p><p>ಕೊಪ್ಪಳ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿಎಂ ಸಿದ್ದರಾಮಯ್ಯ ಅವರು ಯಾವ ಪರಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎನ್ನುವುದಕ್ಕೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರ ಇತ್ತೀಚಿನ ಹೇಳಿಕೆಯೇ ಸಾಕ್ಷಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.</p><p>ಈ ಕುರಿತು ರಾಯರೆಡ್ಡಿ ಅವರ ಹೇಳಿಕೆ ವಿಡಿಯೊ ಹಂಚಿಕೊಂಡು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ‘ಅಕ್ಕಿ ಬೇಕು ಎಂದರೆ, ರಸ್ತೆ ಇಲ್ಲ. ರಸ್ತೆ ಬೇಕು ಎಂದರೆ, ಅಕ್ಕಿ ಇಲ್ಲವೆಂದು ಹೇಳುತ್ತಾರೆ ಎಂದರೆ ಇದು ದಿವಾಳಿತನಕ್ಕೆ ಸಾಕ್ಷಿ’ ಎಂದು ಹೇಳಿದೆ.</p><p>‘ಇದುವೇ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರದ ಬೋಗಸ್ ಗ್ಯಾರಂಟಿಯ ಅಸಲಿಯತ್ತು. ಸ್ವಯಂ ಘೋಷಿತ ಭ್ರಷ್ಟ ಆರ್ಥಿಕ ತಜ್ಞ ಸಿದ್ದರಾಮಯ್ಯ ಅವರು ಯಾವ ಪರಿ ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎನ್ನುವುದಕ್ಕೆ ಇದು ತಾಜಾ ಉದಾಹರಣೆ’ ಎಂದು ಆರೋಪಿಸಿದೆ.</p><p>‘ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಯವರು ಜನರಿಗೆ ಆಯ್ಕೆಗಳನ್ನು ನೀಡುವ ಮೂಲಕ ಸರ್ಕಾರದ ದಿವಾಳಿತನವನ್ನು ಬಟಾ ಬಯಲು ಮಾಡಿದ್ದಾರೆ’ ಎಂದು ಲೇವಡಿ ಮಾಡಿದೆ.</p><p>ಕೊಪ್ಪಳ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>