<p><strong>ಬೆಂಗಳೂರು: </strong>ವಿಧಾನ ಪರಿಷತ್ನ ನೂತನ ಸಭಾಪತಿಯಾಗಿ ಜೆಡಿಎಸ್ ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಮಂಗಳವಾರ ಆಯ್ಕೆಯಾದರು.</p>.<p>ಮಂಗಳವಾರ ಕಲಾಪ ಆರಂಭವಾಗುತ್ತಿದ್ದಂತೆ ಧರಣಿ ಆರಂಭಿಸಿದ ಕಾಂಗ್ರೆಸ್ ಸದಸ್ಯರು, ಸೋಮವಾರ ಜಾನುವಾರು ಹತ್ಯೆ ನಿಷೇಧ ಮಸೂದೆಯ ಮೇಲೆ ಮತ ವಿಭಜನೆಗೆ ಆಗ್ರಹಿಸಿದ ತಮ್ಮ ಬೇಡಿಕೆಯನ್ನು ಪರಿಗಣಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು. ಸೋಮವಾರದ ಕಲಾಪದ ದೃಶ್ಯಾವಳಿ ಪರಿಶೀಲಿಸುವಂತೆ ಪಟ್ಟು ಹಿಡಿದರು.</p>.<p>ಧರಣಿ ಕೈಬಿಟ್ಟು ಸಭಾಪತಿ ಚುನಾವಣೆ ಪ್ರಕ್ರಿಯೆ ನಡೆಸಲು ಸಹಕಾರ ನೀಡುವಂತೆ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಮನವಿ ಮಾಡಿದರು. ಸೋಮವಾರದ ಘಟನೆಯ ಪರಿಶೀಲನೆಯ ಭರವಸೆ ನೀಡಿದರು.</p>.<p>ಆದರೆ, ಕಾಂಗ್ರೆಸ್ ಸದಸ್ಯರು ಧರಣಿ ಹಿಂಪಡೆಯಲು ನಿರಾಕರಿಸಿದರು. ಧರಣಿ ನಡುವೆಯೇ ಉಪ ಸಭಾಪತಿ ಚುನಾವಣಾ ಪ್ರಕ್ರಿಯೆ ಆರಂಭಿಸಿದರು.</p>.<p>ಇದನ್ನೂ ಒದಿ.. <a href="https://www.prajavani.net/karnataka-news/bjp-mkpranesh-elected-as-deputy-speaker-of-legislative-concil-800610.html"><strong>ಪರಿಷತ್ ಉಪ ಸಭಾಪತಿಯಾಗಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ಆಯ್ಕೆ</strong></a></p>.<p>ಜೆಡಿಎಸ್ ಸದಸ್ಯರಾದ ಕೆ.ವಿ. ನಾರಾಯಣಸ್ವಾಮಿ ಮತ್ತು ಎನ್. ಅಪ್ಪಾಜಿಗೌಡ ಅವರು ಹೊರಟ್ಟಿ ಅವರನ್ನು ಸಭಾಪತಿ ಹುದ್ದೆಗೆ ಆಯ್ಕೆ ಮಾಡುವಂತೆ ಪ್ರಸ್ತಾವ ಮಂಡಿಸಿದರು. ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಮತ್ತು ಕೆ.ಎ. ತಿಪ್ಪೇಸ್ವಾಮಿ ಅನುಮೋದಿಸಿದರು.</p>.<p>ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದರು. ಆದರೆ, ಧರಣಿ ಮುಂದುವರಿಸಿದ ಕಾಂಗ್ರೆಸ್ ಸದಸ್ಯರು ಸಭಾಪತಿ ಚುನಾವಣೆಯಿಂದ ದೂರ ಉಳಿದರು.</p>.<p>ಬಸವರಾಜ ಹೊರಟ್ಟಿ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ ಎಂದು ಉಪ ಸಭಾಪತಿ ಘೋಷಿಸಿದರು. ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಇತರ ಸಚಿವರು ಹೊರಟ್ಟಿ ಅವರನ್ನು ಸಭಾಪತಿ ಪೀಠಕ್ಕೆ ಕರೆತಂದರು.</p>.<p>ಬಸವರಾಜ ಹೊರಟ್ಟಿ ಅವರು ಏಳನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ದಶಕಗಳಿಂದ ಮೇಲ್ಮನೆಯ ಸದಸ್ಯರಾಗಿದ್ದಾರೆ.</p>.<p>ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಉಪ ಸಭಾಪತಿ ಪಕ್ಷಪಾತಿಯಾಗಿ ನಡೆದುಕೊಂಡಿದ್ದಾರೆ' ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು.ಕಾಂಗ್ರೆಸ್ ಸದಸ್ಯರು ಧರಣಿ ಮುಂದುವರಿಸಿದ್ದಾರೆ.</p>.<p>ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಸವರಾಜ ಬೊಮ್ಮಾಯಿ ಅವರು ಹೊರಟ್ಟಿ ಅವರನ್ನು ಅಭಿನಂದಿಸಿ ಮಾತನಾಡಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಧಾನ ಪರಿಷತ್ನ ನೂತನ ಸಭಾಪತಿಯಾಗಿ ಜೆಡಿಎಸ್ ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಮಂಗಳವಾರ ಆಯ್ಕೆಯಾದರು.</p>.<p>ಮಂಗಳವಾರ ಕಲಾಪ ಆರಂಭವಾಗುತ್ತಿದ್ದಂತೆ ಧರಣಿ ಆರಂಭಿಸಿದ ಕಾಂಗ್ರೆಸ್ ಸದಸ್ಯರು, ಸೋಮವಾರ ಜಾನುವಾರು ಹತ್ಯೆ ನಿಷೇಧ ಮಸೂದೆಯ ಮೇಲೆ ಮತ ವಿಭಜನೆಗೆ ಆಗ್ರಹಿಸಿದ ತಮ್ಮ ಬೇಡಿಕೆಯನ್ನು ಪರಿಗಣಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು. ಸೋಮವಾರದ ಕಲಾಪದ ದೃಶ್ಯಾವಳಿ ಪರಿಶೀಲಿಸುವಂತೆ ಪಟ್ಟು ಹಿಡಿದರು.</p>.<p>ಧರಣಿ ಕೈಬಿಟ್ಟು ಸಭಾಪತಿ ಚುನಾವಣೆ ಪ್ರಕ್ರಿಯೆ ನಡೆಸಲು ಸಹಕಾರ ನೀಡುವಂತೆ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಮನವಿ ಮಾಡಿದರು. ಸೋಮವಾರದ ಘಟನೆಯ ಪರಿಶೀಲನೆಯ ಭರವಸೆ ನೀಡಿದರು.</p>.<p>ಆದರೆ, ಕಾಂಗ್ರೆಸ್ ಸದಸ್ಯರು ಧರಣಿ ಹಿಂಪಡೆಯಲು ನಿರಾಕರಿಸಿದರು. ಧರಣಿ ನಡುವೆಯೇ ಉಪ ಸಭಾಪತಿ ಚುನಾವಣಾ ಪ್ರಕ್ರಿಯೆ ಆರಂಭಿಸಿದರು.</p>.<p>ಇದನ್ನೂ ಒದಿ.. <a href="https://www.prajavani.net/karnataka-news/bjp-mkpranesh-elected-as-deputy-speaker-of-legislative-concil-800610.html"><strong>ಪರಿಷತ್ ಉಪ ಸಭಾಪತಿಯಾಗಿ ಬಿಜೆಪಿಯ ಎಂ.ಕೆ. ಪ್ರಾಣೇಶ್ ಆಯ್ಕೆ</strong></a></p>.<p>ಜೆಡಿಎಸ್ ಸದಸ್ಯರಾದ ಕೆ.ವಿ. ನಾರಾಯಣಸ್ವಾಮಿ ಮತ್ತು ಎನ್. ಅಪ್ಪಾಜಿಗೌಡ ಅವರು ಹೊರಟ್ಟಿ ಅವರನ್ನು ಸಭಾಪತಿ ಹುದ್ದೆಗೆ ಆಯ್ಕೆ ಮಾಡುವಂತೆ ಪ್ರಸ್ತಾವ ಮಂಡಿಸಿದರು. ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಮತ್ತು ಕೆ.ಎ. ತಿಪ್ಪೇಸ್ವಾಮಿ ಅನುಮೋದಿಸಿದರು.</p>.<p>ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದರು. ಆದರೆ, ಧರಣಿ ಮುಂದುವರಿಸಿದ ಕಾಂಗ್ರೆಸ್ ಸದಸ್ಯರು ಸಭಾಪತಿ ಚುನಾವಣೆಯಿಂದ ದೂರ ಉಳಿದರು.</p>.<p>ಬಸವರಾಜ ಹೊರಟ್ಟಿ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ ಎಂದು ಉಪ ಸಭಾಪತಿ ಘೋಷಿಸಿದರು. ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತ್ತು ಇತರ ಸಚಿವರು ಹೊರಟ್ಟಿ ಅವರನ್ನು ಸಭಾಪತಿ ಪೀಠಕ್ಕೆ ಕರೆತಂದರು.</p>.<p>ಬಸವರಾಜ ಹೊರಟ್ಟಿ ಅವರು ಏಳನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ನಾಲ್ಕು ದಶಕಗಳಿಂದ ಮೇಲ್ಮನೆಯ ಸದಸ್ಯರಾಗಿದ್ದಾರೆ.</p>.<p>ಬಿಜೆಪಿ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಉಪ ಸಭಾಪತಿ ಪಕ್ಷಪಾತಿಯಾಗಿ ನಡೆದುಕೊಂಡಿದ್ದಾರೆ' ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದರು.ಕಾಂಗ್ರೆಸ್ ಸದಸ್ಯರು ಧರಣಿ ಮುಂದುವರಿಸಿದ್ದಾರೆ.</p>.<p>ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಸವರಾಜ ಬೊಮ್ಮಾಯಿ ಅವರು ಹೊರಟ್ಟಿ ಅವರನ್ನು ಅಭಿನಂದಿಸಿ ಮಾತನಾಡಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>