ಶಾಸಕರ ಅಹವಾಲು ಆಲಿಸಲು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಈ ಹಿಂದೆ ಬಸವರಾಜ ರಾಯರಡ್ಡಿ ಪತ್ರ ಬರೆದಿದ್ದರು. ಸೆ. 2ರಂದು ಮತ್ತೆ ಪತ್ರ ಬರೆದು, ಜೆಸ್ಕಾಂ ಅಧಿಕಾರಿಗಳು ಹಾಗೂ ಇಂಧನ ಸಚಿವರ ಜೊತೆ ಸಭೆ ನಡೆಸುವಂತೆ ಮನವಿ ಮಾಡಿದ್ದರು. ಕಲಬುರಗಿ ವಿಭಾಗದಲ್ಲಿ ಕೊಪ್ಪಳ, ಕಲಬುರ್ಗಿ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ, ಮತ್ತು ವಿಜಯನಗರ ಜಿಲ್ಲೆಗಳು ಬರುತ್ತಿದ್ದು, ಎಲ್ಲ ಜಿಲ್ಲೆಗಳಿಗೆ ಜೆಸ್ಕಾಂ ವತಿಯಿಂದ ರೈತರ ಜಮೀನುಗಳ ನೀರಾವರಿ ಪಂಪ್ಸೆಟ್ಗಳಿಗೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಟ್ರಾನ್ಸ್ಫಾರ್ಮರ್ಗಳ ಅಳವಡಿಸಲು ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು.