<p><strong>ಚಿತ್ರದುರ್ಗ</strong>: ಇಲ್ಲಿನ ಮುರುಘಾ ಮಠದ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ವಿರುದ್ಧ ದಾಖಲಾಗಿದ್ದ ಕಿರುಕುಳ, ಮಕ್ಕಳ ಅಪಹರಣ ಪ್ರಕರಣದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿತು.</p>.<p>ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಬಸವರಾಜನ್ ದಂಪತಿ ಪರ ವಕೀಲ ರಾಮಚಂದ್ರ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶೆ ಅನಿತಾ ಕುಮಾರಿ ಅವರು ಗುರುವಾರ ಕೈಗೆತ್ತಿಕೊಂಡರು.</p>.<p>ಮಧ್ಯಾಹ್ನ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿ ವಿಚಾರಣೆಗೆ ಬಂದಿತು. ವಾರ್ಡನ್ ಪರ ಹಾಜರಾದ ವಕೀಲರು ತಕರಾರು ಸಲ್ಲಿಸಿ, ಆರೋಪಿಗಳು ಕೋರ್ಟ್ಗೆ ಹಾಜರಾಗುವಂತೆ ಕೋರಿಕೊಂಡರು. ನ್ಯಾಯಾಧೀಶರ ಸೂಚನೆಯ ಮೇರೆಗೆ ಆರೋಪಿಗಳು ನ್ಯಾಯಾಲಯಕ್ಕೆ ಬಂದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಆದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಇಲ್ಲಿನ ಮುರುಘಾ ಮಠದ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಪತ್ನಿ ಸೌಭಾಗ್ಯ ವಿರುದ್ಧ ದಾಖಲಾಗಿದ್ದ ಕಿರುಕುಳ, ಮಕ್ಕಳ ಅಪಹರಣ ಪ್ರಕರಣದಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ಜಾಮೀನು ಮಂಜೂರು ಮಾಡಿತು.</p>.<p>ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಬಸವರಾಜನ್ ದಂಪತಿ ಪರ ವಕೀಲ ರಾಮಚಂದ್ರ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶೆ ಅನಿತಾ ಕುಮಾರಿ ಅವರು ಗುರುವಾರ ಕೈಗೆತ್ತಿಕೊಂಡರು.</p>.<p>ಮಧ್ಯಾಹ್ನ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿ ವಿಚಾರಣೆಗೆ ಬಂದಿತು. ವಾರ್ಡನ್ ಪರ ಹಾಜರಾದ ವಕೀಲರು ತಕರಾರು ಸಲ್ಲಿಸಿ, ಆರೋಪಿಗಳು ಕೋರ್ಟ್ಗೆ ಹಾಜರಾಗುವಂತೆ ಕೋರಿಕೊಂಡರು. ನ್ಯಾಯಾಧೀಶರ ಸೂಚನೆಯ ಮೇರೆಗೆ ಆರೋಪಿಗಳು ನ್ಯಾಯಾಲಯಕ್ಕೆ ಬಂದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಆದೇಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>