ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ ಶಿವಕುಮಾರ್‌ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಚೆನ್ನಗಿರಿ ಶಾಸಕ ಬಸವರಾಜು

Published 22 ಮೇ 2023, 7:19 IST
Last Updated 22 ಮೇ 2023, 7:19 IST
ಅಕ್ಷರ ಗಾತ್ರ

ಬೆಂಗಳೂರು: ಚೆನ್ನಗಿರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಸವರಾಜು ವಿ. ಶಿವಗಂಗಾ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

16ನೇ ವಿಧಾನಸಭೆಯ ಮೊದಲ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ, ಬಸವರಾಜು ಅವರ ಹೆಸರನ್ನು ವಿಧಾನಸಭೆಯ ಕಾರ್ಯದರ್ಶಿ ಅವರು ಕರೆದರು.

ಹಸಿರು ಶಾಲು ಧರಿಸಿ ಬಂದಿದ್ದ ಅವರು, ‘ಭಗವಂತ ಮತ್ತು ನನ್ನ ಆರಾಧ್ಯ ದೈವ ಡಿ.ಕೆ ಶಿವಕುಮಾರ್‌ ಸಾಹೇಬರ ಮೇಲೆ ಪ್ರಮಾಣ ಮಾಡುತ್ತೇನೆ‘ ಎಂದು ‍ಪ್ರಮಾಣವಚನ ಸ್ವೀಕಾರ ಮಾಡಿದರು.

ಪ್ರಮಾಣವಚನ ಕಾರ್ಯಕ್ರಮ ಆರಂಭವಾಗುವುದಕ್ಕೂ ಮುನ್ನ ಮಾತನಾಡಿದ ಹಂಗಾಮಿ ಸಭಾಧ್ಯಕ್ಷ ಆರ್‌.ವಿ ದೇಶಪಾಂಡೆ ಅವರು, ದೇವರ ಹಾಗೂ ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಬೇಕು ಎಂದು ಸೂಚನೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT