‘ಮುರುಘಾಶ್ರೀ’ ಪ್ರಶಸ್ತಿಗೆ ‘ಪ್ರಜಾವಾಣಿ’ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ಟಸೇರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರನ್ನು ಆಯ್ಕೆ ಮಾಡಲಾಗಿದೆ. ‘ಆರೋಗ್ಯಪೂರ್ಣ ಸಮಾಜಕ್ಕಾಗಿ ಶ್ರಮಿಸುತ್ತಿರುವ ಹೆಬ್ಬಾಳು ವಿರಕ್ತಮಠದ ಮಹಾಂತ ರುದ್ರೇಶ್ವರ ಸ್ವಾಮೀಜಿ, ಸಮಾಜಮುಖಿ ಚಿಂತಕ ಮತ್ತು ಶಿಕಾರಿಪುರ ಜುಬೇದ ವಿದ್ಯಾಸಂಸ್ಥೆಯ ಡಾ.ಅಮ್ಜದ್ ಹುಸೇನ್, ದೇಸಿ ಪದಶಕ್ತಿಯ ಶಬ್ದಗಾರುಡಿಗ ಯುಗಧರ್ಮ ರಾಮಣ್ಣ, ಅಖಿಲ ಭಾರತ ವೀರಶೈವ ಮಹಾಸಭಾದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಎಸ್. ನಾಗರತಿನಂ ಅವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ’ ಎಂದು ಶರಣರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.