<p><strong>ಚಿತ್ರದುರ್ಗ:</strong> ಮುರುಘಾ ಮಠ ಪ್ರದಾನ ಮಾಡುವ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಗೆ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಹಾಗೂ ಬಾಹ್ಯಾಕಾಶ ವಿಜ್ಞಾನಿ ಕೆ.ಕಸ್ತೂರಿ ರಂಗನ್ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>‘2019ನೇ ಸಾಲಿನ ಪ್ರಶಸ್ತಿಗೆರಾಜೀವ್ ತಾರಾನಾಥ್ ಹಾಗೂ 2020ನೇ ಸಾಲಿಗೆ ಕಸ್ತೂರಿ ರಂಗನ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ₹ 5 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾದ ಬಳಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಶಿವಮೂರ್ತಿ ಮುರುಘಾ ಶರಣರು ಶುಕ್ರವಾರ ಪ್ರಕಟಿಸಿದರು.</p>.<p>‘ಸರೋದ್ ವಾದಕರಲ್ಲಿ ರಾಜೀವ್ ತಾರಾನಾಥ್ ಅವರು ಅಗ್ರಗಣ್ಯರು. ಸಾಂಪ್ರದಾಯಿಕ ಹಿಂದೂಸ್ತಾನಿ ಸಂಗೀತದಲ್ಲಿನ ಆಳ ಹಾಗೂ ಭಾವನಾ ಲೋಕದ ತೀಕ್ಷ್ಣತೆಯನ್ನು ತಮ್ಮ ವಾದನದಲ್ಲಿ ಸಮ್ಮಿಶ್ರಗೊಳಿಸುವ ಸಾಧಕ’ ಎಂದು ಬಣ್ಣಿಸಿದರು.</p>.<p>‘ಕಸ್ತೂರಿ ರಂಗನ್ ಅವರು ಒಂಬತ್ತಕ್ಕೂ ಹೆಚ್ಚು ವರ್ಷ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೇತೃತ್ವ ವಹಿಸಿದ್ದರು. ಯೋಜನಾ ಆಯೋಗದ ಸದಸ್ಯರಾಗಿದ್ದವರು. ಇವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಮುರುಘಾ ಮಠ ಪ್ರದಾನ ಮಾಡುವ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಗೆ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಹಾಗೂ ಬಾಹ್ಯಾಕಾಶ ವಿಜ್ಞಾನಿ ಕೆ.ಕಸ್ತೂರಿ ರಂಗನ್ ಅವರನ್ನು ಆಯ್ಕೆ ಮಾಡಲಾಗಿದೆ.</p>.<p>‘2019ನೇ ಸಾಲಿನ ಪ್ರಶಸ್ತಿಗೆರಾಜೀವ್ ತಾರಾನಾಥ್ ಹಾಗೂ 2020ನೇ ಸಾಲಿಗೆ ಕಸ್ತೂರಿ ರಂಗನ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ₹ 5 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ಕೊರೊನಾ ಸೋಂಕಿನ ತೀವ್ರತೆ ಕಡಿಮೆಯಾದ ಬಳಿಕ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಶಿವಮೂರ್ತಿ ಮುರುಘಾ ಶರಣರು ಶುಕ್ರವಾರ ಪ್ರಕಟಿಸಿದರು.</p>.<p>‘ಸರೋದ್ ವಾದಕರಲ್ಲಿ ರಾಜೀವ್ ತಾರಾನಾಥ್ ಅವರು ಅಗ್ರಗಣ್ಯರು. ಸಾಂಪ್ರದಾಯಿಕ ಹಿಂದೂಸ್ತಾನಿ ಸಂಗೀತದಲ್ಲಿನ ಆಳ ಹಾಗೂ ಭಾವನಾ ಲೋಕದ ತೀಕ್ಷ್ಣತೆಯನ್ನು ತಮ್ಮ ವಾದನದಲ್ಲಿ ಸಮ್ಮಿಶ್ರಗೊಳಿಸುವ ಸಾಧಕ’ ಎಂದು ಬಣ್ಣಿಸಿದರು.</p>.<p>‘ಕಸ್ತೂರಿ ರಂಗನ್ ಅವರು ಒಂಬತ್ತಕ್ಕೂ ಹೆಚ್ಚು ವರ್ಷ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೇತೃತ್ವ ವಹಿಸಿದ್ದರು. ಯೋಜನಾ ಆಯೋಗದ ಸದಸ್ಯರಾಗಿದ್ದವರು. ಇವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>