‘ಕನ್ನಡವನ್ನು ನಿಮ್ಮ ಕೈಗಿಟ್ಟಿದ್ದೇನೆ. ಕಾಪಾಡಿಕೊಂಡು ಹೋಗಿ ಎಂದು ಗುರುಗಳಾಗಿದ್ದ ಬಿ.ಎಂ.ಶ್ರೀಕಂಠಯ್ಯ ಹೇಳಿದ್ದರು. ಅದರಂತೆಯೇ ಮುಂದೆ ಕನ್ನಡ ಭಾಷೆಯ ಮೇಲೆ ಅಧ್ಯಯನ ಸಾಗಿತು. ನಿಘಂಟು ಸಿದ್ಧಪಡಿಸುವಾಗ ಗುರುಗಳ ಜತೆ ಕೆಲಸ ಮಾಡಿದೆ. ಪ್ರತಿಯೊಂದು ಶಬ್ದಕ್ಕೂ ಪಾರಿಭಾಷಿಕ ಶಬ್ದ, ಜನರ ಆಡುಭಾಷೆಯ ನುಡಿ ಹುಡುಕಬೇಕಿತ್ತು. ಇದು ಬಹಳ ದೀರ್ಘಕಾಲ ತೆಗೆದುಕೊಂಡಿತು. ಆಗ ಗುರುಗಳು ಇದು ನನ್ನ ಕಾಲದಲ್ಲಿ ಮುಗಿಯುವುದಿಲ್ಲ. ನೀವು ಮುಂದುವರಿಸಿ ಎಂದರು. ಹಾಗೆ ಮುಂದುವರಿಸಿದೆ. ಆ ಪುಣ್ಯದ ಫಲವೇ ಈ ಗೌರವ’ ಎಂದು ಭಾವುಕರಾದರು.