<p><strong>ಬೆಂಗಳೂರು:</strong>ಬಿಬಿಎಂಪಿಯ ದಕ್ಷಿಣ ವಲಯದ ಕೋವಿಡ್ವಾರ್ಡ್ ರೂಮ್ಗೆ ಗುರುವಾರ ಸಂಜೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಮುಸ್ಲಿಂ ಸಿಬ್ಬಂದಿಯ ಕ್ಷಮೆ ಕೋರಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ರೀತಿ ಯಾರದೇ ಕ್ಷಮೆ ಕೇಳಿಲ್ಲ ಎಂದು ತೇಜಸ್ವಿ ಸೂರ್ಯ ಟ್ವಿಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದಿದ್ದ ತೇಜಸ್ವಿ ಸೂರ್ಯ, ಈ ವೇಳೆ 17 ಮುಸ್ಲಿಂ ನೌಕರರ ಹೆಸರು ಮಾತ್ರ ಉಲ್ಲೇಖಿಸಿ ನೇರ ಆರೋಪ ಮಾಡಿದ್ದರು. ಆದರೆ, 200ಕ್ಕೂ ಹೆಚ್ಚು ಜನ ಕಾರ್ಯನಿರ್ವಹಿಸುವ ಈ ವಾರ್ ರೂಮ್ ನ ಹಾಸಿಗೆ ನಿಯೋಜನೆ ವಿಭಾಗದಲ್ಲಿ ಒಬ್ಬ ಮುಸ್ಲಿಂ ಯುವಕ ಮಾತ್ರ ಕೆಲಸ ಮಾಡುತ್ತಿದ್ದರು. ಬೆಡ್ ಬ್ಲಾಕಿಂಗ್ ಹಗರಣಕ್ಕೂ ಉದ್ದೇಶಪೂರ್ವಕವಾಗಿ ಕೋಮು ಬಣ್ಣ ನೀಡಿದ್ದಾರೆ ಎಂದು ಸಂಸದರ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು.</p>.<p><strong>ಓದಿ:</strong> <a href="https://www.prajavani.net/karnataka-news/ruling-party-mla-alleges-bed-blocking-in-bengaluru-827967.html" target="_blank">ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ: ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ</a></p>.<p>‘ಸಂಸದ ತೇಜಸ್ವಿ ಸೂರ್ಯ ಗುರುವಾರ ಸಂಜೆ ವಾರ್ ರೂಮ್ಗೆ ಭೇಟಿ ನೀಡಿದ್ದು ನಿಜ. ಆ ಕ್ಷಣದಲ್ಲಿ ನಾನು ಸ್ಥಳದಲ್ಲಿ ಇರಲಿಲ್ಲ. ಯಾರೂ ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ. ಧೈರ್ಯದಿಂದ ಇರಿ ಎಂದು ಸಂಸದರು ವಿಶ್ವಾಸ ತುಂಬಿದ್ದಾಗಿ ಸಿಬ್ಬಂದಿ ನನಗೆ ತಿಳಿಸಿದರು’ ಎಂದು ವಾರ್ ರೂಮ್ಗೆ ಗುತ್ತಿಗೆ ಸಿಬ್ಬಂದಿ ಪೂರೈಸಿರುವ ಕ್ರಿಸ್ಟಲ್ ಏಜೆನ್ಸಿಯ ಯೋಜನಾ ವ್ಯವಸ್ಥಾಪಕ ಶಿವು ನಾಯ್ಕ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪ್ರಕರಣದ ನಂತರ ಬಹಳಷ್ಟು ಸಿಬ್ಬಂದಿ ಕೆಲಸಕ್ಕೆ ಬರುತ್ತಿರಲಿಲ್ಲ. ಈ ಸಂದರ್ಭದಲ್ಲಿ ರಜೆ ಹಾಕುವುದು ಬೇಡ. ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಕರ್ತವ್ಯಕ್ಕೆ ಹಾಜರಾಗಿ ಎಂದು ಸಂಸದರು ಹೇಳಿದರು ಎಂದು ಸಿಬ್ಬಂದಿ ತಿಳಿಸಿದರು’ ಎಂಬುದಾಗಿ ಅವರು ಹೇಳಿದರು.</p>.<p>ಈ ಸಂಬಂಧ ಪ್ರತಿಕ್ರಿಯೆ ಪಡೆಯಲು ತೇಜಸ್ವಿ ಸೂರ್ಯ ಅವರಿಗೆ ಹಲವು ಬಾರಿ ಕರೆ ಮಾಡಲಾಯಿತು. ಅವರು ಸ್ವೀಕರಿಸಲಿಲ್ಲ.</p>.<p><strong>ಬಿಬಿಎಂಪಿ ಬೆಡ್ ಹಂಚಿಕೆ ಸಾಫ್ಟ್ವೇರ್ನಲ್ಲಿ ಸುಧಾರಣೆ: ತೇಜಸ್ವಿ ಸೂರ್ಯ</strong><br />ಕೋವಿಡ್–19 ಸೋಂಕಿತರಿಗೆ ಬಿಬಿಎಂಪಿಯ ಬೆಡ್ ಹಂಚಿಕೆಗೆ ಸಂಬಂಧಿಸಿದ ಸಾಫ್ಟ್ವೇರ್ನಲ್ಲಿ ಸುಧಾರಣೆ ಮಾಡಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬಿಬಿಎಂಪಿಯ ಬೆಡ್ ಹಂಚಿಕೆ ಕುರಿತು ಹಿರಿಯ ಅಧಿಕಾರಿಗಳು ಮತ್ತು ತಂತ್ರಜ್ಞಾನ ತಂಡದ ಜತೆ ಎರಡನೇ ಸಭೆ ನಡೆಸಲಾಗಿದೆ. ಸಾಫ್ಟ್ವೇರ್ನಲ್ಲಿ ಆಗಬೇಕಿರುವ ಸುಧಾರಣೆಯನ್ನು ಅಂತಿಮಗೊಳಿಸಲಾಗಿದೆ’ ಎಂದು ಉಲ್ಲೇಖಿಸಿದ್ದಾರೆ.</p>.<p>ಈಚೆಗೆ ತೇಜಸ್ವಿ ಸೂರ್ಯ ಅವರು, ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದಿದ್ದರು.</p>.<p>ಮುಂದಿನ 100 ಗಂಟೆಯೊಳಗೆ ಇದನ್ನು ಅನುಷ್ಠಾನಗೊಳಿಸುವ ಗುರಿ ನಿಗದಿಪಡಿಸಿದ್ದೇವೆ. ಈ ಪೈಕಿ ಕೆಲವು ಬದಲಾವಣೆಗಳು ನಾಳೆಯಿಂದಲೇ ಜಾರಿಗೆ ಬರಲಿವೆ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಬೆಡ್ ಹಂಚಿಕೆ ವ್ಯವಸ್ಥೆಯಲ್ಲಿನ ಅಕ್ರಮವನ್ನು ಸರಿಪಡಿಸುವ ಯತ್ನಕ್ಕೆ ಬೆಂಬಲ ನೀಡಿದ ಮುಖ್ಯಮಂತ್ರಿ ಬಿ.ಎ.ಎಸ್.ಯಡಿಯೂರಪ್ಪನವರಿಗೆ ಧನ್ಯವಾದಗಳು. ಅವರ ನಾಯಕತ್ವದಡಿ ದೃಢವಾದ, ಪರಿಣಾಮಕಾರಿ ಮತ್ತು ಪಾರದರ್ಶಕ ಸೇವೆಯನ್ನು ಬೆಂಗಳೂರಿನ ಜನತೆಗೆ ನೀಡಲಿದ್ದೇವೆ ಎಂದು ತೇಜಸ್ವಿ ಸೂರ್ಯ ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಬಿಬಿಎಂಪಿಯ ದಕ್ಷಿಣ ವಲಯದ ಕೋವಿಡ್ವಾರ್ಡ್ ರೂಮ್ಗೆ ಗುರುವಾರ ಸಂಜೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಮುಸ್ಲಿಂ ಸಿಬ್ಬಂದಿಯ ಕ್ಷಮೆ ಕೋರಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ, ಈ ರೀತಿ ಯಾರದೇ ಕ್ಷಮೆ ಕೇಳಿಲ್ಲ ಎಂದು ತೇಜಸ್ವಿ ಸೂರ್ಯ ಟ್ವಿಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<p>ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದಿದ್ದ ತೇಜಸ್ವಿ ಸೂರ್ಯ, ಈ ವೇಳೆ 17 ಮುಸ್ಲಿಂ ನೌಕರರ ಹೆಸರು ಮಾತ್ರ ಉಲ್ಲೇಖಿಸಿ ನೇರ ಆರೋಪ ಮಾಡಿದ್ದರು. ಆದರೆ, 200ಕ್ಕೂ ಹೆಚ್ಚು ಜನ ಕಾರ್ಯನಿರ್ವಹಿಸುವ ಈ ವಾರ್ ರೂಮ್ ನ ಹಾಸಿಗೆ ನಿಯೋಜನೆ ವಿಭಾಗದಲ್ಲಿ ಒಬ್ಬ ಮುಸ್ಲಿಂ ಯುವಕ ಮಾತ್ರ ಕೆಲಸ ಮಾಡುತ್ತಿದ್ದರು. ಬೆಡ್ ಬ್ಲಾಕಿಂಗ್ ಹಗರಣಕ್ಕೂ ಉದ್ದೇಶಪೂರ್ವಕವಾಗಿ ಕೋಮು ಬಣ್ಣ ನೀಡಿದ್ದಾರೆ ಎಂದು ಸಂಸದರ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು.</p>.<p><strong>ಓದಿ:</strong> <a href="https://www.prajavani.net/karnataka-news/ruling-party-mla-alleges-bed-blocking-in-bengaluru-827967.html" target="_blank">ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ: ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ</a></p>.<p>‘ಸಂಸದ ತೇಜಸ್ವಿ ಸೂರ್ಯ ಗುರುವಾರ ಸಂಜೆ ವಾರ್ ರೂಮ್ಗೆ ಭೇಟಿ ನೀಡಿದ್ದು ನಿಜ. ಆ ಕ್ಷಣದಲ್ಲಿ ನಾನು ಸ್ಥಳದಲ್ಲಿ ಇರಲಿಲ್ಲ. ಯಾರೂ ಈ ವಿಷಯವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬೇಡಿ. ಧೈರ್ಯದಿಂದ ಇರಿ ಎಂದು ಸಂಸದರು ವಿಶ್ವಾಸ ತುಂಬಿದ್ದಾಗಿ ಸಿಬ್ಬಂದಿ ನನಗೆ ತಿಳಿಸಿದರು’ ಎಂದು ವಾರ್ ರೂಮ್ಗೆ ಗುತ್ತಿಗೆ ಸಿಬ್ಬಂದಿ ಪೂರೈಸಿರುವ ಕ್ರಿಸ್ಟಲ್ ಏಜೆನ್ಸಿಯ ಯೋಜನಾ ವ್ಯವಸ್ಥಾಪಕ ಶಿವು ನಾಯ್ಕ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಪ್ರಕರಣದ ನಂತರ ಬಹಳಷ್ಟು ಸಿಬ್ಬಂದಿ ಕೆಲಸಕ್ಕೆ ಬರುತ್ತಿರಲಿಲ್ಲ. ಈ ಸಂದರ್ಭದಲ್ಲಿ ರಜೆ ಹಾಕುವುದು ಬೇಡ. ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಕರ್ತವ್ಯಕ್ಕೆ ಹಾಜರಾಗಿ ಎಂದು ಸಂಸದರು ಹೇಳಿದರು ಎಂದು ಸಿಬ್ಬಂದಿ ತಿಳಿಸಿದರು’ ಎಂಬುದಾಗಿ ಅವರು ಹೇಳಿದರು.</p>.<p>ಈ ಸಂಬಂಧ ಪ್ರತಿಕ್ರಿಯೆ ಪಡೆಯಲು ತೇಜಸ್ವಿ ಸೂರ್ಯ ಅವರಿಗೆ ಹಲವು ಬಾರಿ ಕರೆ ಮಾಡಲಾಯಿತು. ಅವರು ಸ್ವೀಕರಿಸಲಿಲ್ಲ.</p>.<p><strong>ಬಿಬಿಎಂಪಿ ಬೆಡ್ ಹಂಚಿಕೆ ಸಾಫ್ಟ್ವೇರ್ನಲ್ಲಿ ಸುಧಾರಣೆ: ತೇಜಸ್ವಿ ಸೂರ್ಯ</strong><br />ಕೋವಿಡ್–19 ಸೋಂಕಿತರಿಗೆ ಬಿಬಿಎಂಪಿಯ ಬೆಡ್ ಹಂಚಿಕೆಗೆ ಸಂಬಂಧಿಸಿದ ಸಾಫ್ಟ್ವೇರ್ನಲ್ಲಿ ಸುಧಾರಣೆ ಮಾಡಲಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಬಿಬಿಎಂಪಿಯ ಬೆಡ್ ಹಂಚಿಕೆ ಕುರಿತು ಹಿರಿಯ ಅಧಿಕಾರಿಗಳು ಮತ್ತು ತಂತ್ರಜ್ಞಾನ ತಂಡದ ಜತೆ ಎರಡನೇ ಸಭೆ ನಡೆಸಲಾಗಿದೆ. ಸಾಫ್ಟ್ವೇರ್ನಲ್ಲಿ ಆಗಬೇಕಿರುವ ಸುಧಾರಣೆಯನ್ನು ಅಂತಿಮಗೊಳಿಸಲಾಗಿದೆ’ ಎಂದು ಉಲ್ಲೇಖಿಸಿದ್ದಾರೆ.</p>.<p>ಈಚೆಗೆ ತೇಜಸ್ವಿ ಸೂರ್ಯ ಅವರು, ಬೆಡ್ ಬ್ಲಾಕಿಂಗ್ ಹಗರಣವನ್ನು ಬಯಲಿಗೆಳೆದಿದ್ದರು.</p>.<p>ಮುಂದಿನ 100 ಗಂಟೆಯೊಳಗೆ ಇದನ್ನು ಅನುಷ್ಠಾನಗೊಳಿಸುವ ಗುರಿ ನಿಗದಿಪಡಿಸಿದ್ದೇವೆ. ಈ ಪೈಕಿ ಕೆಲವು ಬದಲಾವಣೆಗಳು ನಾಳೆಯಿಂದಲೇ ಜಾರಿಗೆ ಬರಲಿವೆ ಎಂದು ಅವರು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಬೆಡ್ ಹಂಚಿಕೆ ವ್ಯವಸ್ಥೆಯಲ್ಲಿನ ಅಕ್ರಮವನ್ನು ಸರಿಪಡಿಸುವ ಯತ್ನಕ್ಕೆ ಬೆಂಬಲ ನೀಡಿದ ಮುಖ್ಯಮಂತ್ರಿ ಬಿ.ಎ.ಎಸ್.ಯಡಿಯೂರಪ್ಪನವರಿಗೆ ಧನ್ಯವಾದಗಳು. ಅವರ ನಾಯಕತ್ವದಡಿ ದೃಢವಾದ, ಪರಿಣಾಮಕಾರಿ ಮತ್ತು ಪಾರದರ್ಶಕ ಸೇವೆಯನ್ನು ಬೆಂಗಳೂರಿನ ಜನತೆಗೆ ನೀಡಲಿದ್ದೇವೆ ಎಂದು ತೇಜಸ್ವಿ ಸೂರ್ಯ ಮತ್ತೊಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>