<p><strong>ಬೆಂಗಳೂರು</strong>: ‘ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ಬಿಬಿಎಂಪಿ ವಾರ್ಡ್ಗಳನ್ನು ಮರು ವಿಂಗಡಣೆ ಮಾಡಿರುವುದರಿಂದ ಚುನಾವಣೆ ವಿಳಂಬವಾಗುತ್ತಿದೆ’ ಎಂದು ಬಿಬಿಎಂಪಿಯ ಆಡಳಿತ ಪಕ್ಷದ ಮಾಜಿ ನಾಯಕ ಎನ್. ನಾಗರಾಜ್ ಆರೋಪಿಸಿದರು.</p>.<p>‘ಬಿಜೆಪಿ ಸರ್ಕಾರಕ್ಕೆ ಬಿಬಿಎಂಪಿಗೆ ಚುನಾವಣೆ ನಡೆದು ಕಾರ್ಪೊರೇಟರ್ಗಳು ಬರುವುದು ಬೇಕಿಲ್ಲ. ಹೀಗಾಗಿ ಎರಡು ವರ್ಷಗಳಿಂದ ಚುನಾವಣೆ ನಡೆಸಲು ಮುಂದಾಗಿಲ್ಲ. ಇದೀಗ ವಾರ್ಡ್ಗಳನ್ನು ಜನಸಂಖ್ಯೆಗೆ ಅನುಗುಣವಾಗಿ ಪುನರ್ವಿಂಗಡಣೆ ಮಾಡದೆ ಎಲ್ಲರಿಗೂ ಅನ್ಯಾಯ ಮಾಡಿದ್ದಾರೆ’ ಎಂದು ದೂರಿದರು.</p>.<p>‘ವಾರ್ಡ್ ವಿಂಗಡಣೆಯನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರಿರುವ ಕ್ಷೇತ್ರದಲ್ಲಿ 39 ಸಾವಿರ ಮತದಾರರ ವಾರ್ಡ್ ಮಾಡಿದ್ದಾರೆ. ಅದೇ ಬಿಜೆಪಿ ಶಾಸಕರಿರುವ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 30 ಸಾವಿರ ಜನರಿಗೆ ವಾರ್ಡ್ ವಿಂಗಡಣೆ ಮಾಡಿದ್ದಾರೆ’ ಎಂದುಆರೋಪಿಸಿದರು.</p>.<p>‘ಬಿಬಿಎಂಪಿ ವಾರ್ಡ್ಗಳನ್ನು ಆಯುಕ್ತರು, ಜಿಲ್ಲಾಧಿಕಾರಿ ಸೇರಿ ಅಧಿಕಾರಿಗಳ ತಂಡ ಜನಸಂಖ್ಯೆಗೆ ಅನುಗುಣವಾಗಿ ಪುನರ್ ವಿಂಗಡಣೆ ಮಾಡಬೇಕಿತ್ತು. ಆದರೆ ಬಿಜೆಪಿ ಶಾಸಕರು ಈ ಪುನರ್ವಿಂಗಡಣೆ ಕಾರ್ಯವನ್ನು ಮಾಡಿದ್ದಾರೆ. ಅವರ ಹಿತಾಸಕ್ತಿಗೆ ಅನುಗುಣವಾಗಿ ನ್ಯಾಯಯುತವಲ್ಲದ, ಜನವಿರೋಧಿ ರೀತಿಯಲ್ಲಿ ವಾರ್ಡ್ ಪುನರ್ವಿಂಗಡಣೆ ಮಾಡಿದ್ದಾರೆ’ ಎಂದು ದೂರಿದರು.</p>.<p>‘ವಾರ್ಡ್ ವಿಂಗಡಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಯಾವ ರೀತಿಯ ತೀರ್ಮಾನ ನೀಡುತ್ತದೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಿಜೆಪಿ ಸರ್ಕಾರ ಅವೈಜ್ಞಾನಿಕವಾಗಿ ಬಿಬಿಎಂಪಿ ವಾರ್ಡ್ಗಳನ್ನು ಮರು ವಿಂಗಡಣೆ ಮಾಡಿರುವುದರಿಂದ ಚುನಾವಣೆ ವಿಳಂಬವಾಗುತ್ತಿದೆ’ ಎಂದು ಬಿಬಿಎಂಪಿಯ ಆಡಳಿತ ಪಕ್ಷದ ಮಾಜಿ ನಾಯಕ ಎನ್. ನಾಗರಾಜ್ ಆರೋಪಿಸಿದರು.</p>.<p>‘ಬಿಜೆಪಿ ಸರ್ಕಾರಕ್ಕೆ ಬಿಬಿಎಂಪಿಗೆ ಚುನಾವಣೆ ನಡೆದು ಕಾರ್ಪೊರೇಟರ್ಗಳು ಬರುವುದು ಬೇಕಿಲ್ಲ. ಹೀಗಾಗಿ ಎರಡು ವರ್ಷಗಳಿಂದ ಚುನಾವಣೆ ನಡೆಸಲು ಮುಂದಾಗಿಲ್ಲ. ಇದೀಗ ವಾರ್ಡ್ಗಳನ್ನು ಜನಸಂಖ್ಯೆಗೆ ಅನುಗುಣವಾಗಿ ಪುನರ್ವಿಂಗಡಣೆ ಮಾಡದೆ ಎಲ್ಲರಿಗೂ ಅನ್ಯಾಯ ಮಾಡಿದ್ದಾರೆ’ ಎಂದು ದೂರಿದರು.</p>.<p>‘ವಾರ್ಡ್ ವಿಂಗಡಣೆಯನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರಿರುವ ಕ್ಷೇತ್ರದಲ್ಲಿ 39 ಸಾವಿರ ಮತದಾರರ ವಾರ್ಡ್ ಮಾಡಿದ್ದಾರೆ. ಅದೇ ಬಿಜೆಪಿ ಶಾಸಕರಿರುವ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 30 ಸಾವಿರ ಜನರಿಗೆ ವಾರ್ಡ್ ವಿಂಗಡಣೆ ಮಾಡಿದ್ದಾರೆ’ ಎಂದುಆರೋಪಿಸಿದರು.</p>.<p>‘ಬಿಬಿಎಂಪಿ ವಾರ್ಡ್ಗಳನ್ನು ಆಯುಕ್ತರು, ಜಿಲ್ಲಾಧಿಕಾರಿ ಸೇರಿ ಅಧಿಕಾರಿಗಳ ತಂಡ ಜನಸಂಖ್ಯೆಗೆ ಅನುಗುಣವಾಗಿ ಪುನರ್ ವಿಂಗಡಣೆ ಮಾಡಬೇಕಿತ್ತು. ಆದರೆ ಬಿಜೆಪಿ ಶಾಸಕರು ಈ ಪುನರ್ವಿಂಗಡಣೆ ಕಾರ್ಯವನ್ನು ಮಾಡಿದ್ದಾರೆ. ಅವರ ಹಿತಾಸಕ್ತಿಗೆ ಅನುಗುಣವಾಗಿ ನ್ಯಾಯಯುತವಲ್ಲದ, ಜನವಿರೋಧಿ ರೀತಿಯಲ್ಲಿ ವಾರ್ಡ್ ಪುನರ್ವಿಂಗಡಣೆ ಮಾಡಿದ್ದಾರೆ’ ಎಂದು ದೂರಿದರು.</p>.<p>‘ವಾರ್ಡ್ ವಿಂಗಡಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಯಾವ ರೀತಿಯ ತೀರ್ಮಾನ ನೀಡುತ್ತದೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>