ಬೆಂಗಳೂರು: ‘ಲೋಕಸಭೆ ಚುನಾವಣೆ ನಂತರ ಬಿಬಿಎಂಪಿ ಹಾಗೂ ಇತರೆ ಚುನಾವಣೆಗಳು ನಡೆಯಲಿವೆ. ಪಕ್ಷ ಸಂಘಟನೆಯಲ್ಲಿನ ಸಾಮರ್ಥ್ಯ ಪರಿಗಣಿಸಿ ಪಾಲಿಕೆ ಚುನಾವಣೆಯಲ್ಲಿ ಅವಕಾಶ ನೀಡಲಾಗುವುದು’ ಎಂದು ಪಕ್ಷದ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಬೆಳಿಗ್ಗೆ 10.30ರ ನಂತರ ಕೆಪಿಸಿಸಿ ಕಚೇರಿ ಹಾಗೂ ಸರ್ಕಾರಿ ಗೃಹಕಚೇರಿ ಬಳಿ ನನ್ನನ್ನು ಬಂದು ಭೇಟಿ ಮಾಡಿ. ನಾವು ಪಕ್ಷದ ಕೆಲಸವನ್ನು ಮಾಡಬೇಕು. ಎಲ್ಲರೂ ಸೇರಿ ಬೆಂಗಳೂರಿನ ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಬೇಕು’ ಎಂದರು.