ಆರ್ಥಿಕ ಸಂಕಷ್ಟದ ಮಧ್ಯೆಯೂ ಮುಖ್ಯಮಂತ್ರಿಯವರು ಶ್ರಮಿಕರ ಬಗ್ಗೆ ಕಾಳಜಿವಹಿಸಿ ಪ್ಯಾಕೇಜ್ ಪ್ರಕಟಿಸಿದ್ದಾರೆ. ಹಣ್ಣು–ತರಕಾರಿ ಬೆಳೆಗಾರರಿಗೆ ಪ್ಯಾಕೇಜ್ ಪ್ರಕಟಿಸಲಿದ್ದಾರೆ. ಇಂತಿಷ್ಟೇ ಪರಿಹಾರ ನೀಡಿ ಅಂತ ಅವರನ್ನು ಒತ್ತಾಯ ಮಾಡುವುದಿಲ್ಲ. ಪರಿಹಾರ ಎನ್ನುವುದು ಪ್ರಾಣ ಬಿಡುವವನಿಗೆ ಜೀವ ಜಲ ನೀಡಿ ಉಳಿಸುವುದಕ್ಕೆ ಸಮ. ಎಲ್ಲರಿಗೂ ಬದುಕುವ ವ್ಯವಸ್ಥೆ ಆಗಬೇಕಿದ್ದು, ಅದನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.