ನಗರದಲ್ಲಿ ಶನಿವಾರ ನಡೆದ ಬಸವ ಸಮಿತಿಯ ಸಂಸ್ಥಾಪಕರ ದಿನಾಚರಣೆ, ಡಾ.ಬಿ.ಡಿ. ಜತ್ತಿಯವರ 110ನೇ ಜನ್ಮದಿನೋತ್ಸವ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಬಿ.ಡಿ. ಜತ್ತಿಯವರು ಒಂದು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಅಸಾಮಾನ್ಯ ಕೆಲಸಗಳನ್ನು ಮಾಡಿದ್ದಾರೆ. ಪಂಚಾಯಿತಿ ಸದಸ್ಯನ ಹುದ್ದೆಯಿಂದ ಹಿಡಿದು ದೇಶದ ಅತ್ಯುನ್ನತ ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಫ.ಗು. ಹಳಕಟ್ಟಿ, ಹರ್ಡೇಕರ್ ಮಂಜಪ್ಪ ಮತ್ತು ಬಿ.ಡಿ. ಜತ್ತಿಯವರ ತ್ಯಾಗ ಮತ್ತು ಪರಿಶ್ರಮದಿಂದ ಇಂದು ವಚನಗಳು ನಮಗೆ ಲಭ್ಯವಾಗಿವೆ’ ಎಂದರು.