‘ಜಯರಾಮಯ್ಯ ಭ್ರಷ್ಟ ಅಧಿಕಾರಿ. ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಅದು ಬಿಟ್ಟು ಪ್ರಾಧಿಕಾರಕ್ಕೆ ಮತ್ತೆ ನೇಮಕ ಮಾಡಿರುವುದು ಸರಿಯಲ್ಲ’ ಎಂದು ದಲಿತ ಮಹಾಸಭಾ ದೂರಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮನವಿ ಮಾಡಿದೆ. ಒಂದು ವೇಳೆ ನೇಮಕ ಹಿಂದಕ್ಕೆ ಪಡೆಯದಿದ್ದರೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗುತ್ತದೆ ಎಂದು ಎಚ್ಚರಿಸಿದೆ.