ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ₹ 750 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿತ್ತು. ಬಿಜೆಪಿ ಸರ್ಕಾರ ಬಂದ ಬಳಿಕ ಎಲ್ಲವನ್ನೂ ವಾಪಸ್ ಪಡೆಯಲಾಗಿದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಸಚಿವರಿಗೆ ಲೂಟಿ ಮಾಡಲು ಅವಕಾಶ ನೀಡಿರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಒಂದೂವರೆ ವರ್ಷದೊಳಗೆ ಭಾರಿ ಪ್ರಮಾಣದಲ್ಲಿ ಬೆಳೆದು ನಿಂತಿದ್ದಾರೆ ಎಂದರು.