ಈ ಕುರಿತು ಶುಕ್ರವಾರ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಇತ್ತೀಚಿನ ದಿನಗಳಲ್ಲಿ ಬಿಡಿಎ ಅಂಗಳದಿಂದ ದಿನಕ್ಕೊಂದು ಹಗರಣಗಳು ಹೊರಬರುತ್ತಿವೆ. ಸಂಸ್ಥೆಯನ್ನು ಮುನ್ನಡೆಸಬೇಕಾದ ಅಧ್ಯಕ್ಷ ಮತ್ತು ಆಯುಕ್ತರೇ ಗುದ್ದಾಟಕ್ಕೆ ಇಳಿದಿದ್ದಾರೆ. ಸ್ವಹಿತಾಸಕ್ತಿಗಾಗಿ ಇಬ್ಬರು ನಡೆಸುತ್ತಿರುವ ಗುದ್ದಾಟ ಬೀದಿ ಜಗಳದ ಸ್ವರೂಪ ಪಡೆದುಕೊಂಡಿದೆ. ಇದರಿಂದ ಜನರು ಬಿಡಿಎ ಮೇಲೆ ವಿಶ್ವಾಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದ್ದಾರೆ.