<p><strong>ಬೆಂಗಳೂರು</strong>: ‘ಆರ್ಎಸ್ಎಸ್ ಕಾರ್ಯಕ್ರಮವಾಗಲಿ ಅಥವಾ ನಮಾಜ್ ಆಗಲಿ ಸಾರ್ವಜನಿಕವಾಗಿ ನಡೆಸುವುದಾದರೆ ಸರ್ಕಾರದ ಅನುಮತಿ ಅಗತ್ಯ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕ ನಮಾಜ್ ಮಾಡಿದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.</p>.<p>‘ವಿಮಾನ ನಿಲ್ದಾಣಗಳಲ್ಲಿ ಪ್ರಾರ್ಥನೆಗೆ ಪ್ರತ್ಯೇಕ ಕೊಠಡಿಗಳಿರುತ್ತವೆ. ಆದರೆ, ಇಲ್ಲಿ ಸಾರ್ವಜನಿಕವಾಗಿ ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬಿಜೆಪಿಯವರು ಅದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ’ ಎಂದರು.</p>.<p>‘ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ಗುಜರಾತ್ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಗರ್ಬಾ ನೃತ್ಯ ಮಾಡಿರುವುದು ಸರಿ ಎಂದು ಒಪ್ಪಿಕೊಳ್ಳುತ್ತಾರೆಯೇ? ನಮಾಜ್ ಸಲ್ಲದು ಎಂದಾದರೆ ಗರ್ಬಾ ನೃತ್ಯ ಕೂಡ ಸಲ್ಲದು’ ಎಂದರು.</p>.<p>‘ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಬೇಕೆಂಬ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಬಿಜೆಪಿ ತಡೆ ತಂದಿರುವುದು ಯಾಕೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p>.<p>‘ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬುದು ನಮ್ಮ ಸರ್ಕಾರದ ನಿಲುವು. ಬೆಂಗಳೂರಿನಲ್ಲಿ ಪ್ರತಿಭಟನೆಗಳಿಗೆ ಸ್ವಾತಂತ್ರ್ಯ ಉದ್ಯಾನವನ್ನು ನಿಗದಿಪಡಿಸಲಾಗಿದೆ. ಅದಕ್ಕೆ ಅನುಮತಿ ಪಡೆಯಬೇಕು. ನಾವು ಕೂಡ ಮತ ಕಳವು ಅಭಿಯಾನ ನಡೆಸಿದಾಗ ಅನುಮತಿ ಪಡೆದೇ ಮಾಡಿದ್ದೇವೆ. ಇಡೀ ರಾಜ್ಯಕ್ಕೆ ಈ ನಿಯಮವನ್ನು ವಿಸ್ತರಿಸಿದಾಗ ಬಿಜೆಪಿ, ತನ್ನ ಅಂಗ ಸಂಸ್ಥೆಗಳ ಮೂಲಕ ಧಾರವಾಡದಲ್ಲಿ ಮಧ್ಯಂತರ ತಡೆ ತಂದಿದ್ದೇಕೆ’ ಎಂದು ಅವರು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಆರ್ಎಸ್ಎಸ್ ಕಾರ್ಯಕ್ರಮವಾಗಲಿ ಅಥವಾ ನಮಾಜ್ ಆಗಲಿ ಸಾರ್ವಜನಿಕವಾಗಿ ನಡೆಸುವುದಾದರೆ ಸರ್ಕಾರದ ಅನುಮತಿ ಅಗತ್ಯ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.</p>.<p>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕ ನಮಾಜ್ ಮಾಡಿದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.</p>.<p>‘ವಿಮಾನ ನಿಲ್ದಾಣಗಳಲ್ಲಿ ಪ್ರಾರ್ಥನೆಗೆ ಪ್ರತ್ಯೇಕ ಕೊಠಡಿಗಳಿರುತ್ತವೆ. ಆದರೆ, ಇಲ್ಲಿ ಸಾರ್ವಜನಿಕವಾಗಿ ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬಿಜೆಪಿಯವರು ಅದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ’ ಎಂದರು.</p>.<p>‘ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ಗುಜರಾತ್ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಗರ್ಬಾ ನೃತ್ಯ ಮಾಡಿರುವುದು ಸರಿ ಎಂದು ಒಪ್ಪಿಕೊಳ್ಳುತ್ತಾರೆಯೇ? ನಮಾಜ್ ಸಲ್ಲದು ಎಂದಾದರೆ ಗರ್ಬಾ ನೃತ್ಯ ಕೂಡ ಸಲ್ಲದು’ ಎಂದರು.</p>.<p>‘ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅನುಮತಿ ಪಡೆಯಬೇಕೆಂಬ ಕಾಂಗ್ರೆಸ್ ಸರ್ಕಾರದ ಆದೇಶಕ್ಕೆ ಬಿಜೆಪಿ ತಡೆ ತಂದಿರುವುದು ಯಾಕೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p>.<p>‘ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬುದು ನಮ್ಮ ಸರ್ಕಾರದ ನಿಲುವು. ಬೆಂಗಳೂರಿನಲ್ಲಿ ಪ್ರತಿಭಟನೆಗಳಿಗೆ ಸ್ವಾತಂತ್ರ್ಯ ಉದ್ಯಾನವನ್ನು ನಿಗದಿಪಡಿಸಲಾಗಿದೆ. ಅದಕ್ಕೆ ಅನುಮತಿ ಪಡೆಯಬೇಕು. ನಾವು ಕೂಡ ಮತ ಕಳವು ಅಭಿಯಾನ ನಡೆಸಿದಾಗ ಅನುಮತಿ ಪಡೆದೇ ಮಾಡಿದ್ದೇವೆ. ಇಡೀ ರಾಜ್ಯಕ್ಕೆ ಈ ನಿಯಮವನ್ನು ವಿಸ್ತರಿಸಿದಾಗ ಬಿಜೆಪಿ, ತನ್ನ ಅಂಗ ಸಂಸ್ಥೆಗಳ ಮೂಲಕ ಧಾರವಾಡದಲ್ಲಿ ಮಧ್ಯಂತರ ತಡೆ ತಂದಿದ್ದೇಕೆ’ ಎಂದು ಅವರು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>