ಸಿದ್ದರಾಮಯ್ಯ ಅವರಿಗೆ ಸೋಲು ಅನ್ನೋದು ಈಗಲೇ ಸ್ಪಷ್ಟವಾಗಿದೆ.ಮಾಜಿ ಸಿಎಂ ಆಗಿ, ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಈ ರೀತಿ ಮಾತನಾಡಿರೋದು ಶೋಭೆ ತರುವುದಿಲ್ಲ.ಅವರಿಗೆ ಚುನಾವಣೆಯಲ್ಲಿ ಮತದಾರರು ಉತ್ತರ ನೀಡಲಿದ್ದಾರೆ ಎಂದು ಕಪ್ಪು ಹಣದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು.ಏನಾದರೂ ಆರೋಪ ಮಾಡುವುದಾದರೇ ಆಧಾರ ಇಟ್ಟು ಮಾತನಾಡಲಿ ಎಂದು ಸವಾಲು ಹಾಕಿದರು.