<p><strong>ಬೆಂಗಳೂರು:</strong> ‘ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸಂಸ್ಥೆಯ ಟ್ರೈನಿ ಎಂಜಿನಿಯರ್ಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಮರುಪರಿಶೀಲಿಸಿ, ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. </p>.<p>ಈ ಬಗ್ಗೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ‘ಬಿಇಎಲ್ ಸಂಸ್ಥೆಯು ಇತ್ತಿಚೆಗೆ ತನ್ನ ಬೆಂಗಳೂರು ಕೇಂದ್ರಕ್ಕೆ ಟ್ರೈನಿ ಎಂಜಿನಿಯರ್ಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಧಿಸೂಚನೆ ಕೇವಲ ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿದೆ. ಸ್ಥಳೀಯ ಕನ್ನಡಿಗರಿಗೆ ಯಾವ ಅವಕಾಶವೂ ದೊರೆಯದ ರೀತಿಯಲ್ಲಿ ಈ ಅಧಿಸೂಚನೆ ಸಿದ್ಧಗೊಂಡಿದೆ’ ಎಂದು ಹೇಳಿದ್ದಾರೆ.</p>.<p>‘ಸಂವಿಧಾನದ ಒಕ್ಕೂಟ ತತ್ವವನ್ನು ಈ ಅಧಿಸೂಚನೆ ಗಾಳಿಗೆ ತೂರಿದೆ. ಬಿಇಎಲ್ ಸಂಸ್ಥೆಗೆ ಬೆಂಗಳೂರು ಮೊದಲಿನಿಂದಲೂ ಪ್ರಮುಖ ಚಟುವಟಿಕೆಯ ಕೇಂದ್ರವಾಗಿದ್ದು, ಸಂಸ್ಥೆಯು ಈ ಮಟ್ಟಕ್ಕೆ ಬೆಳೆಯಲು ಸ್ಥಳೀಯ ಕನ್ನಡಿಗರು ಪ್ರಮುಖ ಕಾರಣಕರ್ತರಾಗಿದ್ದಾರೆ. ಹಾಗಾಗಿ, ಸಮತೋಲಿತ ನೇಮಕಾತಿ ಪ್ರಕ್ರಿಯೆಯು ರಾಷ್ಟ್ರೀಯ ಐಕ್ಯತೆಯನ್ನು ಪ್ರೋತ್ಸಾಹಿಸುತ್ತದೆ. ರಾಜ್ಯಗಳ ನಡುವಿನ ಬಾಂಧವ್ಯವನ್ನೂ ವೃದ್ಧಿಸಲು ಅದು ಸಹಕಾರಿಯಾಗುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಸಂಸ್ಥೆಯ ಟ್ರೈನಿ ಎಂಜಿನಿಯರ್ಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಮರುಪರಿಶೀಲಿಸಿ, ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. </p>.<p>ಈ ಬಗ್ಗೆ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ‘ಬಿಇಎಲ್ ಸಂಸ್ಥೆಯು ಇತ್ತಿಚೆಗೆ ತನ್ನ ಬೆಂಗಳೂರು ಕೇಂದ್ರಕ್ಕೆ ಟ್ರೈನಿ ಎಂಜಿನಿಯರ್ಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಅಧಿಸೂಚನೆ ಕೇವಲ ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿದೆ. ಸ್ಥಳೀಯ ಕನ್ನಡಿಗರಿಗೆ ಯಾವ ಅವಕಾಶವೂ ದೊರೆಯದ ರೀತಿಯಲ್ಲಿ ಈ ಅಧಿಸೂಚನೆ ಸಿದ್ಧಗೊಂಡಿದೆ’ ಎಂದು ಹೇಳಿದ್ದಾರೆ.</p>.<p>‘ಸಂವಿಧಾನದ ಒಕ್ಕೂಟ ತತ್ವವನ್ನು ಈ ಅಧಿಸೂಚನೆ ಗಾಳಿಗೆ ತೂರಿದೆ. ಬಿಇಎಲ್ ಸಂಸ್ಥೆಗೆ ಬೆಂಗಳೂರು ಮೊದಲಿನಿಂದಲೂ ಪ್ರಮುಖ ಚಟುವಟಿಕೆಯ ಕೇಂದ್ರವಾಗಿದ್ದು, ಸಂಸ್ಥೆಯು ಈ ಮಟ್ಟಕ್ಕೆ ಬೆಳೆಯಲು ಸ್ಥಳೀಯ ಕನ್ನಡಿಗರು ಪ್ರಮುಖ ಕಾರಣಕರ್ತರಾಗಿದ್ದಾರೆ. ಹಾಗಾಗಿ, ಸಮತೋಲಿತ ನೇಮಕಾತಿ ಪ್ರಕ್ರಿಯೆಯು ರಾಷ್ಟ್ರೀಯ ಐಕ್ಯತೆಯನ್ನು ಪ್ರೋತ್ಸಾಹಿಸುತ್ತದೆ. ರಾಜ್ಯಗಳ ನಡುವಿನ ಬಾಂಧವ್ಯವನ್ನೂ ವೃದ್ಧಿಸಲು ಅದು ಸಹಕಾರಿಯಾಗುತ್ತದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>