<p><strong>ಉಗರಗೋಳ (ಬೆಳಗಾವಿ ಜಿಲ್ಲೆ):</strong> ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಬುಧವಾರ ಹುಂಡಿ ಎಣಿಕೆ ಪೂರ್ಣಗೊಂಡಿದ್ದು, 61 ದಿನಗಳ ಅವಧಿಯಲ್ಲಿ ₹1.68 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.</p><p>2023ರ ನವೆಂಬರ್ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಹುಂಡಿಯಲ್ಲಿ ಹಾಕಿರುವ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಎಣಿಸಲಾಯಿತು. ಈ ಬಾರಿ ₹ 1.39 ಕೋಟಿ ನಗದು, ₹ 25.72 ಲಕ್ಷ ಮೌಲ್ಯದ ಚಿನ್ನಾಭರಣ, ₹ 3.28 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ. </p><p>ಇದರೊಂದಿಗೆ ಕೀನ್ಯಾ, ಸಿಂಗಾಪುರ, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೆಟ್ಸ್ ಮತ್ತಿತರ ದೇಶಗಳ ಕರೆನ್ಸಿಗಳು ಹುಂಡಿಯಲ್ಲಿ ಪತ್ತೆಯಾಗಿವೆ.</p><p>ಕರ್ನಾಟಕ ಮಾತ್ರವಲ್ಲದೆ; ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಯಲ್ಲಮ್ಮ ದೇವಿ ಸನ್ನಿಧಿಗೆ ಆಗಮಿಸುತ್ತಾರೆ. ತಮ್ಮ ಆರ್ಥಿಕ ಶಕ್ತಿಗೆ ಅನುಗುಣವಾಗಿ ದೇವಿಗೆ ಕಾಣಿಕೆ ಅರ್ಪಿಸಿ ಭಕ್ತಿ ಮೆರೆಯುತ್ತಾರೆ.</p><p>ಯಲ್ಲಮ್ಮ ದೇವಸ್ಥಾನ, ಜಿಲ್ಲಾಧಿಕಾರಿ ಕಚೇರಿ, ಧಾರ್ಮಿಕ ದತ್ತಿ ಇಲಾಖೆ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮೂರು ಹಂತಗಳಲ್ಲಿ ಹುಂಡಿ ಎಣಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಗರಗೋಳ (ಬೆಳಗಾವಿ ಜಿಲ್ಲೆ):</strong> ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಬುಧವಾರ ಹುಂಡಿ ಎಣಿಕೆ ಪೂರ್ಣಗೊಂಡಿದ್ದು, 61 ದಿನಗಳ ಅವಧಿಯಲ್ಲಿ ₹1.68 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ.</p><p>2023ರ ನವೆಂಬರ್ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಹುಂಡಿಯಲ್ಲಿ ಹಾಕಿರುವ ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಎಣಿಸಲಾಯಿತು. ಈ ಬಾರಿ ₹ 1.39 ಕೋಟಿ ನಗದು, ₹ 25.72 ಲಕ್ಷ ಮೌಲ್ಯದ ಚಿನ್ನಾಭರಣ, ₹ 3.28 ಲಕ್ಷ ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ. </p><p>ಇದರೊಂದಿಗೆ ಕೀನ್ಯಾ, ಸಿಂಗಾಪುರ, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೆಟ್ಸ್ ಮತ್ತಿತರ ದೇಶಗಳ ಕರೆನ್ಸಿಗಳು ಹುಂಡಿಯಲ್ಲಿ ಪತ್ತೆಯಾಗಿವೆ.</p><p>ಕರ್ನಾಟಕ ಮಾತ್ರವಲ್ಲದೆ; ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಯಲ್ಲಮ್ಮ ದೇವಿ ಸನ್ನಿಧಿಗೆ ಆಗಮಿಸುತ್ತಾರೆ. ತಮ್ಮ ಆರ್ಥಿಕ ಶಕ್ತಿಗೆ ಅನುಗುಣವಾಗಿ ದೇವಿಗೆ ಕಾಣಿಕೆ ಅರ್ಪಿಸಿ ಭಕ್ತಿ ಮೆರೆಯುತ್ತಾರೆ.</p><p>ಯಲ್ಲಮ್ಮ ದೇವಸ್ಥಾನ, ಜಿಲ್ಲಾಧಿಕಾರಿ ಕಚೇರಿ, ಧಾರ್ಮಿಕ ದತ್ತಿ ಇಲಾಖೆ, ಸವದತ್ತಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮೂರು ಹಂತಗಳಲ್ಲಿ ಹುಂಡಿ ಎಣಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>