<p><strong>ಬೆಳಗಾವಿ: </strong>ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಇಲ್ಲಿನ ಸದಾಶಿವನಗರದ ಸ್ಮಶಾನದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಗುರುವಾರ ಆಯೋಜಿಸಿದ್ದ ಮೌಢ್ಯ ವಿರೋಧಿ ಪರಿವರ್ತನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸೋಪಾನ ಬಾಳಕೃಷ್ಣ ಜಾಂಬೋಟಿ– ರೇಖಾ ಹಿರೇಬಾಗೇವಾಡಿ ಜೋಡಿ ಕುವೆಂಪು ಮಂತ್ರಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>.<p>ಮಹಾಪರಿನಿರ್ವಾಣ ದಿನದಂದು 2014ರಿಂದಲೂ ಸ್ಮಶಾನದಲ್ಲಿ ಸಾಮೂಹಿಕ ಭೋಜನ, ಚಿಂತನ–ಮಂಥನ ಹಾಗೂ ವಾಸ್ತವ್ಯ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ, ಅಂತರ್ಜಾತಿ ಸರಳ ವಿವಾಹ ಮಾಡಿಸಿದ್ದು ವಿಶೇಷವಾಗಿತ್ತು.</p>.<p>‘ಸ್ಮಶಾನದಲ್ಲಿ ಮದುವೆ ಮಾಡಿಸಿರುವುದು ದೇಶದಲ್ಲಿಯೇ ಮೊದಲು. ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ. ಈ ಮೂಲಕ ನಾವು, ಮೌಢ್ಯತೆಯ ವಿರುದ್ಧ ದಾಪುಗಾಲು ಇಟ್ಟಿದ್ದೇವೆ’ ಎಂದು ಶಾಸಕ, ಕಾರ್ಯಕ್ರಮದ ರೂವಾರಿ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಸ್ಮಶಾನದಲ್ಲಿ ಮದುವೆ ಮಾಡಿಕೊಳ್ಳುವವರಿಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಬೇಕು. ಇದನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿಯೇ ಘೋಷಿಸಬೇಕು. ಭಯಮುಕ್ತ ಸಮಾಜ ನಿರ್ಮಾಣಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕು’ ಎಂದು ಒತ್ತಾಯಿಸಿದರು.</p>.<p>ನವದಂಪತಿಗೆ ವೈಯಕ್ತಿಕವಾಗಿ ₹ 50 ಸಾವಿರ ನೀಡಿದರು</p>.<p>ಚಿಂತಕ ಬರಗೂರು ರಾಮಚಂದ್ರಪ್ಪ ಮಾತನಾಡಿ, ‘ದೇಶದಲ್ಲಿ ವಿಚಾರದ ಹೆಸರಲ್ಲಿ ವಿಕಾರ ತುಂಬುವ ಕೆಲಸ ನಡೆಯುತ್ತಿದೆ’ ಎಂದು ವಿಷಾದಿಸಿದರು.</p>.<p>‘ಇದು ವಿವೇಕಾನಂದರ ಕಾಲವಲ್ಲ. ವಿವಾದಾನಂದರ, ವಿಕಾರಾನಂದರ ಕಾಲದಲ್ಲಿದ್ದೇವೆ. ವಿಚಾರಗಳನ್ನು ವಿಕಾರಗಳನ್ನಾಗಿ ಮಾಡಲಾಗುತ್ತಿದೆ. ಕೆಲವರು ವಿವೇಕಾನಂದರನ್ನು ಹೈಜಾಕ್ ಮಾಡಿದ್ದು, ಅವರನ್ನು ವಿಮೋಚನೆಗೊಳಿಸಬೇಕಾಗಿದೆ. ಮತಕ್ಕಾಗಿ ಅಪಹರಣಕ್ಕೆ ಒಳಗಾಗಿರುವ ಅಂಬೇಡ್ಕರ್ ಅವರನ್ನೂ ಬಿಡುಗಡೆ ಮಾಡಬೇಕಾಗಿದೆ’ ಎಂದು ಹೇಳಿದರು.</p>.<p>ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಮಾತನಾಡಿ, ‘ದೇಶದ ಸಮಸ್ಯೆಗಳು ಹಾಗೂ ಸವಾಲುಗಳಿಗೆ ಸಂವಿಧಾನ ಕಾರಣ ಎಂದು ಕೆಲವರು ವಾದಿಸುತ್ತಿದ್ದಾರೆ. ಅದು ಸುಳ್ಳು. ದೋಷ ಇರುವುದು ಸಂವಿಧಾನದಲ್ಲಲ್ಲ; ಅದನ್ನು ಅನುಷ್ಠಾನಗೊಳಿಸುತ್ತಿರುವ ನಮ್ಮಲ್ಲಿ’ ಎಂದರು.</p>.<p>**</p>.<p>ಸ್ಮಶಾನದಲ್ಲಿ ಕಾರ್ಯಕ್ರಮ ಮಾಡಿದರೆ ಕೆಟ್ಟದಾಗುತ್ತದೆ ಎಂದು ಕೆಲವರು ಹೇಳಿದ್ದರು. ಆದರೆ, ನನಗೆ ಎಲ್ಲ ವಿಚಾರದಲ್ಲೂ ಲಾಭವೇ ಆಗಿದೆ<br /><em><strong>-ಸತೀಶ ಜಾರಕಿಹೊಳಿ, ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಇಲ್ಲಿನ ಸದಾಶಿವನಗರದ ಸ್ಮಶಾನದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಗುರುವಾರ ಆಯೋಜಿಸಿದ್ದ ಮೌಢ್ಯ ವಿರೋಧಿ ಪರಿವರ್ತನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸೋಪಾನ ಬಾಳಕೃಷ್ಣ ಜಾಂಬೋಟಿ– ರೇಖಾ ಹಿರೇಬಾಗೇವಾಡಿ ಜೋಡಿ ಕುವೆಂಪು ಮಂತ್ರಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.</p>.<p>ಮಹಾಪರಿನಿರ್ವಾಣ ದಿನದಂದು 2014ರಿಂದಲೂ ಸ್ಮಶಾನದಲ್ಲಿ ಸಾಮೂಹಿಕ ಭೋಜನ, ಚಿಂತನ–ಮಂಥನ ಹಾಗೂ ವಾಸ್ತವ್ಯ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿ, ಅಂತರ್ಜಾತಿ ಸರಳ ವಿವಾಹ ಮಾಡಿಸಿದ್ದು ವಿಶೇಷವಾಗಿತ್ತು.</p>.<p>‘ಸ್ಮಶಾನದಲ್ಲಿ ಮದುವೆ ಮಾಡಿಸಿರುವುದು ದೇಶದಲ್ಲಿಯೇ ಮೊದಲು. ಇದೊಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ. ಈ ಮೂಲಕ ನಾವು, ಮೌಢ್ಯತೆಯ ವಿರುದ್ಧ ದಾಪುಗಾಲು ಇಟ್ಟಿದ್ದೇವೆ’ ಎಂದು ಶಾಸಕ, ಕಾರ್ಯಕ್ರಮದ ರೂವಾರಿ ಸತೀಶ ಜಾರಕಿಹೊಳಿ ಹೇಳಿದರು.</p>.<p>‘ಸ್ಮಶಾನದಲ್ಲಿ ಮದುವೆ ಮಾಡಿಕೊಳ್ಳುವವರಿಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಬೇಕು. ಇದನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿಯೇ ಘೋಷಿಸಬೇಕು. ಭಯಮುಕ್ತ ಸಮಾಜ ನಿರ್ಮಾಣಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕು’ ಎಂದು ಒತ್ತಾಯಿಸಿದರು.</p>.<p>ನವದಂಪತಿಗೆ ವೈಯಕ್ತಿಕವಾಗಿ ₹ 50 ಸಾವಿರ ನೀಡಿದರು</p>.<p>ಚಿಂತಕ ಬರಗೂರು ರಾಮಚಂದ್ರಪ್ಪ ಮಾತನಾಡಿ, ‘ದೇಶದಲ್ಲಿ ವಿಚಾರದ ಹೆಸರಲ್ಲಿ ವಿಕಾರ ತುಂಬುವ ಕೆಲಸ ನಡೆಯುತ್ತಿದೆ’ ಎಂದು ವಿಷಾದಿಸಿದರು.</p>.<p>‘ಇದು ವಿವೇಕಾನಂದರ ಕಾಲವಲ್ಲ. ವಿವಾದಾನಂದರ, ವಿಕಾರಾನಂದರ ಕಾಲದಲ್ಲಿದ್ದೇವೆ. ವಿಚಾರಗಳನ್ನು ವಿಕಾರಗಳನ್ನಾಗಿ ಮಾಡಲಾಗುತ್ತಿದೆ. ಕೆಲವರು ವಿವೇಕಾನಂದರನ್ನು ಹೈಜಾಕ್ ಮಾಡಿದ್ದು, ಅವರನ್ನು ವಿಮೋಚನೆಗೊಳಿಸಬೇಕಾಗಿದೆ. ಮತಕ್ಕಾಗಿ ಅಪಹರಣಕ್ಕೆ ಒಳಗಾಗಿರುವ ಅಂಬೇಡ್ಕರ್ ಅವರನ್ನೂ ಬಿಡುಗಡೆ ಮಾಡಬೇಕಾಗಿದೆ’ ಎಂದು ಹೇಳಿದರು.</p>.<p>ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಮಾತನಾಡಿ, ‘ದೇಶದ ಸಮಸ್ಯೆಗಳು ಹಾಗೂ ಸವಾಲುಗಳಿಗೆ ಸಂವಿಧಾನ ಕಾರಣ ಎಂದು ಕೆಲವರು ವಾದಿಸುತ್ತಿದ್ದಾರೆ. ಅದು ಸುಳ್ಳು. ದೋಷ ಇರುವುದು ಸಂವಿಧಾನದಲ್ಲಲ್ಲ; ಅದನ್ನು ಅನುಷ್ಠಾನಗೊಳಿಸುತ್ತಿರುವ ನಮ್ಮಲ್ಲಿ’ ಎಂದರು.</p>.<p>**</p>.<p>ಸ್ಮಶಾನದಲ್ಲಿ ಕಾರ್ಯಕ್ರಮ ಮಾಡಿದರೆ ಕೆಟ್ಟದಾಗುತ್ತದೆ ಎಂದು ಕೆಲವರು ಹೇಳಿದ್ದರು. ಆದರೆ, ನನಗೆ ಎಲ್ಲ ವಿಚಾರದಲ್ಲೂ ಲಾಭವೇ ಆಗಿದೆ<br /><em><strong>-ಸತೀಶ ಜಾರಕಿಹೊಳಿ, ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>