ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಹಾರಾಷ್ಟ್ರ ಸರ್ಕಾರ ಜೊತೆ ಚರ್ಚಿಸಲು ಸಿಎಸ್‌ಗೆ ಸಿಎಂ ಸೂಚನೆ: ರಾಮಲಿಂಗಾ ರೆಡ್ಡಿ

Published : 25 ಫೆಬ್ರುವರಿ 2025, 14:42 IST
Last Updated : 25 ಫೆಬ್ರುವರಿ 2025, 14:42 IST
ಫಾಲೋ ಮಾಡಿ
Comments
ಕನ್ನಡ ಮಾತನಾಡಿ ಎಂದವರ ಮೇಲೆ ಹಲ್ಲೆಯಾಗುತ್ತದೆ ಎಂಬುದು ಆಘಾತ ಮತ್ತು ಆತಂಕವನ್ನುಂಟು ಮಾಡಿದೆ. ಗಡಿ ಭಾಗದ ಕನ್ನಡಿಗರಿಗೆ ಸೂಕ್ತ ರಕ್ಷಣೆ ಒದಗಿಸಬೇಕು..
–ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ 
‘ನಾವು ಸುಮ್ಮನಿರುವ ಪ್ರಶ್ನೆಯೇ ಇಲ್ಲ’
ಕನ್ನಡದ ವಿಚಾರಕ್ಕೆ ಎಂಇಎಸ್ ಕಾರ್ಯಕರ್ತರು ಬಂದರೆ ಸುಮ್ಮನಿರುವ ಪ್ರಶ್ನೆಯೇ ಇಲ್ಲ. ಮರಾಠರ ಜಾಗದಲ್ಲೇ ಅವರಿಗೆ ಉತ್ತರ ಕೊಡುತ್ತೇವೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಎಚ್ಚರಿಕೆ ನೀಡಿದರು.‌ ‘ಕರ್ನಾಟಕದ ನೀರು ಗಾಳಿ ಅನ್ನ ತಿಂದು ಮತ್ತೊಂದು ಭಾಷೆಯ ಬಗ್ಗೆ ಬಹಳ ಪ್ರೀತಿ ವ್ಯಾಮೋಹ ತೋರಿಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ಎಂಇಎಸ್ ಕಾರ್ಯಕರ್ತರ ವರ್ತನೆ ಇದೇ ರೀತಿ ಮುಂದುವರಿದರೆ ಗೂಂಡಾ ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟಬೇಕಾಗುತ್ತದೆ’ ಎಂದರು.
ಬೆಳಗಾವಿಯ ಜನಪ್ರತಿನಿಧಿಗಳು ಮತಗಳ ಆಸೆಗೆ ಮರಾಠಿಗರ ಜತೆ ಒಳಒಪ್ಪಂದ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು.
–ಟಿ.ಎ.ನಾರಾಯಣಗೌಡ, ಅಧ್ಯಕ್ಷ, ಕರ್ನಾಟಕ ರಕ್ಷಣಾ ವೇದಿಕೆ
ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿರುವ ಶಿವಸೇನಾವನ್ನು ಕೇಂದ್ರ ನಿಷೇಧಿಸಬೇಕು. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮರಾಠಿಯಲ್ಲಿ ಮಾತನಾಡುವುದನ್ನು ಬಿಡಬೇಕು.
–ಪ್ರವೀಣ ಶೆಟ್ಟಿ, ಅಧ್ಯಕ್ಷ, ಕರ್ನಾಟಕ ರಕ್ಷಣಾ ವೇದಿಕೆ
ಕನ್ನಡ, ಮರಾಠಿ ಭಾಷಾ ಬಾಂಧವ್ಯ ಹದಗೆಡಿಸುವ ಮಹಾರಾಷ್ಟ್ರದ ಸಂಘಟನೆಗಳಿಗೆ ರಾಜ್ಯದಲ್ಲಿ ಅವಕಾಶ ಕೊಡಬಾರದು.
–ಬಸವ ಜಯಮೃತ್ಯುಂಜಯ ಸ್ವಾಮೀಜಿ, ಲಿಂಗಾಯತ ಪಂಚಮಸಾಲಿ ಪೀಠ
ಬೆಳಗಾವಿಯಲ್ಲಿ ಕೆಲ ರಾಜಕಾರಣಿಗಳು ಎಂಇಎಸ್‌ ಕುರಿತು ಮೃದು ಧೋರಣೆ ಹೊಂದಿದ್ದಾರೆ. ಎಂಇಎಸ್‌ ನಿಷೇಧಕ್ಕೆ ಸರ್ಕಾರ ಹಿಂಜರಿಯಬಾರದು.
–ಬಸವರಾಜ ಹೊರಟ್ಟಿ, ವಿಧಾನ ಪರಿಷತ್ತಿನ ಸಭಾಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT