<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲದ ನಡುವೆಯೇ 'ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ಮಸೂದೆ-2025'ಕ್ಕೆ ಸರ್ಕಾರವು ಅಂಗೀಕಾರ ಪಡೆಯಿತು.</p><p>ಗೃಹ ಸಚಿವ ಜಿ.ಪರಮೇಶ್ವರ ಅವರು ಈ ಮಸೂದೆಯನ್ನು ಮಂಡಿಸಿದರು.</p><p>ಮಸೂದೆಗೆ ವಿರೋಧ ವ್ಯಕ್ತಪಡಿಸಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡುತ್ತಿದ್ದಾಗ ಮಧ್ಯಪ್ರವೇಶಿಸಿದ ಸಚಿವ ಬೈರತಿ ಸುರೇಶ್, 'ಕರಾವಳಿಗೆ ಬೆಂಕಿ ಹಚ್ಚಿದ್ದೀರ. ಇಲ್ಲಿಯೂ ಬೆಂಕಿ ಹಚ್ಚುತ್ತಿದ್ದೀರ' ಎಂದು ಬಿಜೆಪಿ ಸದಸ್ಯರನ್ನು ಉದ್ದೇಶಿಸಿ ನೀಡಿದ ಹೇಳಿಕೆಯು ಗದ್ದಲಕ್ಕೆ ಕಾರಣವಾಯಿತು. </p><p>ಕರಾವಳಿ ಭಾಗದಿಂದ ಆರಿಸಿ ಬಂದ ಬಿಜೆಪಿ ಎಲ್ಲ ಸದಸ್ಯರು ಬೈರತಿ ಸುರೇಶ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಅವರು ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಮಧ್ಯೆ ಗದ್ದಲ ಉಂಟಾಗಿ ಕೋಲಾಹಲವೇ ಸೃಷ್ಟಿಯಾಯಿತು.</p><p>ಸಚಿವ ಬೈರತಿ ಸುರೇಶ್ ಹೇಳಿದ ಮಾತನ್ನು ಕಡತದಿಂದ ವಾಪಸ್ ತೆಗೆಯುತ್ತೇನೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬಿಜೆಪಿ ಸದಸ್ಯರನ್ನು ಮನವೊಲಿಸಲು ಮುಂದಾದರು. ಆದರೆ, ತೀವ್ರ ಆಕ್ರೋಶಗೊಂಡ ಬಿಜೆಪಿಯ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ರಾಜೇಶ್ ನಾಯಕ್, ಚನ್ನಬಸಪ್ಪ ಮುಂತಾದವರು ಸಭಾಧ್ಯಕ್ಷರ ಪೀಠದ ಮುಂದೆ ಬಂದು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಅಶೋಕ ಅವರು ಮಸೂದೆಯ ಪ್ರತಿಯನ್ನು ಹರಿದು, ಎಸೆದರು.</p><p>ಈ ಮಧ್ಯೆಯೇ ಸಚಿವ ಪರಮೇಶ್ವರ ಅವರು ಮಸೂದೆಗೆ ಸದನದ ಅನುಮೋದನೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುವರ್ಣ ವಿಧಾನಸೌಧ (ಬೆಳಗಾವಿ):</strong> ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲದ ನಡುವೆಯೇ 'ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷಾಪರಾಧಗಳ ಪ್ರತಿಬಂಧಕ ಮಸೂದೆ-2025'ಕ್ಕೆ ಸರ್ಕಾರವು ಅಂಗೀಕಾರ ಪಡೆಯಿತು.</p><p>ಗೃಹ ಸಚಿವ ಜಿ.ಪರಮೇಶ್ವರ ಅವರು ಈ ಮಸೂದೆಯನ್ನು ಮಂಡಿಸಿದರು.</p><p>ಮಸೂದೆಗೆ ವಿರೋಧ ವ್ಯಕ್ತಪಡಿಸಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಮಾತನಾಡುತ್ತಿದ್ದಾಗ ಮಧ್ಯಪ್ರವೇಶಿಸಿದ ಸಚಿವ ಬೈರತಿ ಸುರೇಶ್, 'ಕರಾವಳಿಗೆ ಬೆಂಕಿ ಹಚ್ಚಿದ್ದೀರ. ಇಲ್ಲಿಯೂ ಬೆಂಕಿ ಹಚ್ಚುತ್ತಿದ್ದೀರ' ಎಂದು ಬಿಜೆಪಿ ಸದಸ್ಯರನ್ನು ಉದ್ದೇಶಿಸಿ ನೀಡಿದ ಹೇಳಿಕೆಯು ಗದ್ದಲಕ್ಕೆ ಕಾರಣವಾಯಿತು. </p><p>ಕರಾವಳಿ ಭಾಗದಿಂದ ಆರಿಸಿ ಬಂದ ಬಿಜೆಪಿ ಎಲ್ಲ ಸದಸ್ಯರು ಬೈರತಿ ಸುರೇಶ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಅವರು ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದರು. ಈ ವೇಳೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ಮಧ್ಯೆ ಗದ್ದಲ ಉಂಟಾಗಿ ಕೋಲಾಹಲವೇ ಸೃಷ್ಟಿಯಾಯಿತು.</p><p>ಸಚಿವ ಬೈರತಿ ಸುರೇಶ್ ಹೇಳಿದ ಮಾತನ್ನು ಕಡತದಿಂದ ವಾಪಸ್ ತೆಗೆಯುತ್ತೇನೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬಿಜೆಪಿ ಸದಸ್ಯರನ್ನು ಮನವೊಲಿಸಲು ಮುಂದಾದರು. ಆದರೆ, ತೀವ್ರ ಆಕ್ರೋಶಗೊಂಡ ಬಿಜೆಪಿಯ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ರಾಜೇಶ್ ನಾಯಕ್, ಚನ್ನಬಸಪ್ಪ ಮುಂತಾದವರು ಸಭಾಧ್ಯಕ್ಷರ ಪೀಠದ ಮುಂದೆ ಬಂದು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಅಶೋಕ ಅವರು ಮಸೂದೆಯ ಪ್ರತಿಯನ್ನು ಹರಿದು, ಎಸೆದರು.</p><p>ಈ ಮಧ್ಯೆಯೇ ಸಚಿವ ಪರಮೇಶ್ವರ ಅವರು ಮಸೂದೆಗೆ ಸದನದ ಅನುಮೋದನೆ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>