<p><strong>ಬೆಳಗಾವಿ:</strong> ಮೀಸಲಾತಿಗೆ ಆಗ್ರಹಿಸಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಮೇಲೆ ಧರಣಿ ಕುಳಿತ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮುಖಂಡರಾದ ಬಸನಗೌಡ ಪಾಟೀಲ ಯತ್ನಾಳ್, ಅರವಿಂದ ಬೆಲ್ಲದ, ಈರಣ್ಣ ಕಡಾಡಿ ಮುಂತಾದವರನ್ನು ಪೊಲೀಸರು ವಾಹನದಲ್ಲಿ ಹತ್ತಿಸಿಕೊಂಡು ಬೇರೆಡೆ ಕರೆದೊಯ್ದರು. </p><p>ಬಳಿಕವೂ ಸಮಾಜದ ವಕೀಲರು, ರಾಜಕಾರಣಿಗಳು, ಕಾರ್ಯಕರ್ತರು ಹೋರಾಟ ಮುಂದುವರಿಸಿದ್ದರು. ಅವರನ್ನು ಗುಂಪು ಗುಂಪಾಗಿ ಚದುರಿಸಿದ ಪೊಲೀಸರು ಹೆದ್ದಾರಿ ಸಂಚಾರಕ್ಕೆ ಅನುವು ಮಾಡಿದರು.</p><p>ಇದಕ್ಕೂ ಮುನ್ನ 'ಪ್ರಜಾವಾಣಿ' ಜತೆ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ' ಸಮಾಜ ಬಾಂಧವರ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸರಿಯಲ್ಲ. ಅಮಾಯಕರ ಮೇಲೆ ದೌರ್ಜನ್ಯ ಮಾಡಿದ್ದಾರೆ. ಇದು ಬ್ರಿಟಿಷ್ ಸರ್ಕಾರ. ಪೊಲೀಸರ ಮೂಲಕ ಹೋರಾಟ ಹತ್ತಿಕ್ಕಲಾಗಿದೆ. ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು. ಸಂವಿಧಾನಕ್ಕೆ ಮಾಡಿದ ಅಪಮಾನ. ನಮ್ಮ ಹೋರಾಟದ ಶಕ್ತಿ ಕುಂದಿಸಲು ಸಾಧ್ಯವಿಲ್ಲ'ಎಂದರು.</p><p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, 'ಹೋರಾಟ ಹತ್ತಿಕ್ಕಲು ಕಾಂಗ್ರೆಸ್ ಸರ್ಕಾರದಲ್ಲಿರುವ ನಮ್ಮದೇ ಸಮಾಜದ ಕೆಲ ಕಿಡಿಗೇಡಿಗಳು ಮಾಡಿಸಿದ ಕೆಲಸವಿದು. ಮುಂದಿನ ಹೋರಾಟದ ಬಗ್ಗೆ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ' ಎಂದರು.</p><p>'ನೇತೃತ್ವ ವಹಿಸಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಾಮಾನ್ಯ ಜನರ ಮೇಲೂ ಲಾಠಿ ಬೀಸಿದ್ದಾರೆ. ಆ ಮೂಲಕ ಜನರ ಶಾಪಕ್ಕೆ ಈ ಸರ್ಕಾರ ಗುರಿಯಾಗಿದೆ. ಇನ್ಮುಂದೆ ರಾಜ್ಯಾಧ್ಯಂತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ' ಎಂದು ವಿಧಾನಸಭೆ ಉಪ ನಾಯಕ ಅರವಿಂದ ಪಾಟೀಲ ಆಕ್ರೋಶ ಹೊರಹಾಕಿದರು.</p><p>'ಮುಖ್ಯಮಂತ್ರಿಗಳ ಭೇಟಿಗೆ ಶಾಂತಿಯುತವಾಗಿ ಹೋಗುತ್ತಿದ್ದ ನಮ್ಮವರ ಮೇಲೆ ಇವತ್ತು ಲಾಠಿ ಚಾರ್ಜ್ ಮಾಡುವ ಕೆಟ್ಟ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡಿದೆ. ಇದೊಂದು ಕರ್ನಾಟಕದ ಇತಿಹಾಸದಲ್ಲಿ ಮರೆಯಲಾರದ ಘಟನೆ' ಎಂದರು.</p>.ಪಂಚಮಸಾಲಿ ಹೋರಾಟ | ಟ್ರ್ಯಾಕ್ಟರ್ ತರಲು ಯತ್ನ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.ಪಂಚಮಸಾಲಿ ಹೋರಾಟ | ಯತ್ನಾಳ್ ಆಗಮನ: ‘ಹುಲಿ ಬಂತು ಹುಲಿ’ ಎಂದು ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮೀಸಲಾತಿಗೆ ಆಗ್ರಹಿಸಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಮೇಲೆ ಧರಣಿ ಕುಳಿತ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮುಖಂಡರಾದ ಬಸನಗೌಡ ಪಾಟೀಲ ಯತ್ನಾಳ್, ಅರವಿಂದ ಬೆಲ್ಲದ, ಈರಣ್ಣ ಕಡಾಡಿ ಮುಂತಾದವರನ್ನು ಪೊಲೀಸರು ವಾಹನದಲ್ಲಿ ಹತ್ತಿಸಿಕೊಂಡು ಬೇರೆಡೆ ಕರೆದೊಯ್ದರು. </p><p>ಬಳಿಕವೂ ಸಮಾಜದ ವಕೀಲರು, ರಾಜಕಾರಣಿಗಳು, ಕಾರ್ಯಕರ್ತರು ಹೋರಾಟ ಮುಂದುವರಿಸಿದ್ದರು. ಅವರನ್ನು ಗುಂಪು ಗುಂಪಾಗಿ ಚದುರಿಸಿದ ಪೊಲೀಸರು ಹೆದ್ದಾರಿ ಸಂಚಾರಕ್ಕೆ ಅನುವು ಮಾಡಿದರು.</p><p>ಇದಕ್ಕೂ ಮುನ್ನ 'ಪ್ರಜಾವಾಣಿ' ಜತೆ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ' ಸಮಾಜ ಬಾಂಧವರ ಮೇಲೆ ಲಾಠಿ ಚಾರ್ಜ್ ಮಾಡಿದ್ದು ಸರಿಯಲ್ಲ. ಅಮಾಯಕರ ಮೇಲೆ ದೌರ್ಜನ್ಯ ಮಾಡಿದ್ದಾರೆ. ಇದು ಬ್ರಿಟಿಷ್ ಸರ್ಕಾರ. ಪೊಲೀಸರ ಮೂಲಕ ಹೋರಾಟ ಹತ್ತಿಕ್ಕಲಾಗಿದೆ. ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು. ಸಂವಿಧಾನಕ್ಕೆ ಮಾಡಿದ ಅಪಮಾನ. ನಮ್ಮ ಹೋರಾಟದ ಶಕ್ತಿ ಕುಂದಿಸಲು ಸಾಧ್ಯವಿಲ್ಲ'ಎಂದರು.</p><p>ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, 'ಹೋರಾಟ ಹತ್ತಿಕ್ಕಲು ಕಾಂಗ್ರೆಸ್ ಸರ್ಕಾರದಲ್ಲಿರುವ ನಮ್ಮದೇ ಸಮಾಜದ ಕೆಲ ಕಿಡಿಗೇಡಿಗಳು ಮಾಡಿಸಿದ ಕೆಲಸವಿದು. ಮುಂದಿನ ಹೋರಾಟದ ಬಗ್ಗೆ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ' ಎಂದರು.</p><p>'ನೇತೃತ್ವ ವಹಿಸಿದ್ದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಸಾಮಾನ್ಯ ಜನರ ಮೇಲೂ ಲಾಠಿ ಬೀಸಿದ್ದಾರೆ. ಆ ಮೂಲಕ ಜನರ ಶಾಪಕ್ಕೆ ಈ ಸರ್ಕಾರ ಗುರಿಯಾಗಿದೆ. ಇನ್ಮುಂದೆ ರಾಜ್ಯಾಧ್ಯಂತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ' ಎಂದು ವಿಧಾನಸಭೆ ಉಪ ನಾಯಕ ಅರವಿಂದ ಪಾಟೀಲ ಆಕ್ರೋಶ ಹೊರಹಾಕಿದರು.</p><p>'ಮುಖ್ಯಮಂತ್ರಿಗಳ ಭೇಟಿಗೆ ಶಾಂತಿಯುತವಾಗಿ ಹೋಗುತ್ತಿದ್ದ ನಮ್ಮವರ ಮೇಲೆ ಇವತ್ತು ಲಾಠಿ ಚಾರ್ಜ್ ಮಾಡುವ ಕೆಟ್ಟ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡಿದೆ. ಇದೊಂದು ಕರ್ನಾಟಕದ ಇತಿಹಾಸದಲ್ಲಿ ಮರೆಯಲಾರದ ಘಟನೆ' ಎಂದರು.</p>.ಪಂಚಮಸಾಲಿ ಹೋರಾಟ | ಟ್ರ್ಯಾಕ್ಟರ್ ತರಲು ಯತ್ನ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ.ಪಂಚಮಸಾಲಿ ಹೋರಾಟ | ಯತ್ನಾಳ್ ಆಗಮನ: ‘ಹುಲಿ ಬಂತು ಹುಲಿ’ ಎಂದು ಘೋಷಣೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>