<p>ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನಲ್ಲಿ ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರಗಳ ಮಾಹಿತಿ ಇಲ್ಲಿದೆ</p>.<h2>ಫಸಲ್ ಬಿಮಾ: 74 ಲಕ್ಷ ರೈತರು ನೋಂದಣಿ</h2><p>ಫಸಲ್ ಬಿಮಾ ಯೋಜನೆ ಜನಪ್ರಿಯವಾಗಿದ್ದು, ಕಳೆದ ಸಾಲಿನಲ್ಲಿ 74 ಲಕ್ಷ ರೈತರು ತಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಂಡಿದ್ದು, ₹5,534 ಕೋಟಿ ಬೆಳೆ ವಿಮಾ ಮೊತ್ತ ಪಾವತಿ ಮಾಡಲಾಗಿದೆ. ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿದೆ. ಈ ಯೋಜನೆಯಡಿ ವಿಮಾ ಕಂತನ್ನು ಸರ್ಕಾರ ಶೇ 98ರಷ್ಟು ಪಾವತಿಸಿದರೆ, ರೈತರು ಶೇ 2ರಷ್ಟು ಪಾವತಿಸಿದರೆ ಸಾಕು.</p><p><em><strong>–ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಪ್ರಶ್ನೆ: ಅಲ್ಲಮಪ್ರಭು ಪಾಟೀಲ, ಕಾಂಗ್ರೆಸ್</strong></em></p><h2>‘ಕೇಂದ್ರದ ಅನುದಾನ ಬಂದರೆ ಬಿಡುಗಡೆ’</h2><p>ನರೇಗಾದಡಿ ಸಾಮಗ್ರಿ ವೆಚ್ಚಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ. ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಅದೇ ರೀತಿ ಹಣಕಾಸು ಆಯೋಗದಿಂದಲೂ ಸುಮಾರು ₹2,500 ಕೋಟಿ ಅನುದಾನ ಬರಬೇಕು. ಇದನ್ನು ಕೇಂದ್ರದ ಗಮನಕ್ಕೆ ತರಲಾಗುವುದು. ಅನುದಾನ ಬಂದ ಬಳಿಕ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು.</p><p><em><strong>–ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಪ್ರಶ್ನೆ: ಎಚ್.ಡಿ.ತಮ್ಮಯ್ಯ, ಕಾಂಗ್ರೆಸ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನಲ್ಲಿ ವಿಧಾನಸಭೆಯಲ್ಲಿ ನಡೆದ ಪ್ರಶ್ನೋತ್ತರಗಳ ಮಾಹಿತಿ ಇಲ್ಲಿದೆ</p>.<h2>ಫಸಲ್ ಬಿಮಾ: 74 ಲಕ್ಷ ರೈತರು ನೋಂದಣಿ</h2><p>ಫಸಲ್ ಬಿಮಾ ಯೋಜನೆ ಜನಪ್ರಿಯವಾಗಿದ್ದು, ಕಳೆದ ಸಾಲಿನಲ್ಲಿ 74 ಲಕ್ಷ ರೈತರು ತಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಂಡಿದ್ದು, ₹5,534 ಕೋಟಿ ಬೆಳೆ ವಿಮಾ ಮೊತ್ತ ಪಾವತಿ ಮಾಡಲಾಗಿದೆ. ನೋಂದಣಿ ಮಾಡಿಸಿಕೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿದೆ. ಈ ಯೋಜನೆಯಡಿ ವಿಮಾ ಕಂತನ್ನು ಸರ್ಕಾರ ಶೇ 98ರಷ್ಟು ಪಾವತಿಸಿದರೆ, ರೈತರು ಶೇ 2ರಷ್ಟು ಪಾವತಿಸಿದರೆ ಸಾಕು.</p><p><em><strong>–ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಪ್ರಶ್ನೆ: ಅಲ್ಲಮಪ್ರಭು ಪಾಟೀಲ, ಕಾಂಗ್ರೆಸ್</strong></em></p><h2>‘ಕೇಂದ್ರದ ಅನುದಾನ ಬಂದರೆ ಬಿಡುಗಡೆ’</h2><p>ನರೇಗಾದಡಿ ಸಾಮಗ್ರಿ ವೆಚ್ಚಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ. ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಅದೇ ರೀತಿ ಹಣಕಾಸು ಆಯೋಗದಿಂದಲೂ ಸುಮಾರು ₹2,500 ಕೋಟಿ ಅನುದಾನ ಬರಬೇಕು. ಇದನ್ನು ಕೇಂದ್ರದ ಗಮನಕ್ಕೆ ತರಲಾಗುವುದು. ಅನುದಾನ ಬಂದ ಬಳಿಕ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು.</p><p><em><strong>–ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಪ್ರಶ್ನೆ: ಎಚ್.ಡಿ.ತಮ್ಮಯ್ಯ, ಕಾಂಗ್ರೆಸ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>