ಬೆಳಿಗ್ಗೆ 9.40ಕ್ಕೆ ಕಲಾಪ ಆರಂಭವಾಯಿತು. ಆಗ, ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಎದುರು ಧರಣಿ ಮುಂದುವರಿಸಿದ್ದರು. ಮಧ್ಯ ಪ್ರವೇಶಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ದೇಶದ ಜನರು ನಮ್ಮನ್ನು ಗಮನಿಸುತ್ತಿದ್ದಾರೆ. ಧರಣಿ ಹಿಂಪಡೆಯಿರಿ. ಚರ್ಚೆಗೆ ಅವಕಾಶವಿದೆ. ಸದನದ ಕಲಾಪವನ್ನು ಸುಗಮವಾಗಿ ನಡೆಸಲು ಅವಕಾಶ ಮಾಡಿಕೊಡಿ’ ಎಂದು ಮನವಿ ಮಾಡಿದರು.