ಡ್ರೋನ್ ಸೇರಿದಂತೆ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಅರಣ್ಯ ಹಾಗೂ ಕಂದಾಯ ಭೂಮಿಯ ಜಂಟಿ ಸರ್ವೆ ಕಾರ್ಯ ನಡೆಸಲಾಗುವುದು. ನಿಖರವಾಗಿ ಕಂದಾಯ, ಅರಣ್ಯ, ಖಾಸಗಿ ಭೂಮಿ ಗುರುತಿಸಲಾಗುವುದು. ಅಲ್ಲಿಯವರೆಗೂ ಒತ್ತುವರಿ ತೆರವು ಮಾಡುವುದಿಲ್ಲ. ಯಥಾಸ್ಥಿತಿ ಕಾಪಾಡಲಾಗುವುದು. ಜನರು ತಮ್ಮ ಬಳಿ ಇರುವ ದಾಖಲೆಗಳನ್ನು ಸಲ್ಲಿಸಬೇಕು. ಸರ್ವೆ ನಂತರವೂ 30ರಿಂದ 40 ವರ್ಷಗಳ ಹಿಂದೆ ಮನೆಕಟ್ಟಿಕೊಂಡವರಿಗೆ, ಜನವಸತಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.