<p><strong>ಬೆಳಗಾವಿ:</strong> ಉತ್ತರ ಕರ್ನಾಟಕ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸಂಬಂಧ ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ಆರು ನಿರ್ಣಯಗಳನ್ನು ಅಂಗೀಕರಿಸಲಾಯಿತು.</p><p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಶುಕ್ರವಾರ ರಾತ್ರಿ 9.50ರ ವೇಳೆಗೆ ಈ ಮಸೂದೆಗಳನ್ನು ಮಂಡಿಸಿದರು.</p><p>‘ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ಯನ್ನು ರಾಷ್ಟ್ರೀಯ ಅಭಿವೃದ್ಧಿಯಾಗಿ ಪರಿಗಣಿಸಿ, ಮಹಾರಾಷ್ಟ್ರದ ವಿದರ್ಭ ಮಾದರಿಯಲ್ಲಿ ಕೇಂದ್ರ ಸರ್ಕಾರ ತಕ್ಷಣ ₹ 5 ಸಾವಿರ ಕೋಟಿಯ ‘ವಿಶೇಷ ಕೇಂದ್ರ ನೆರವು’ ಯೋಜನೆಯನ್ನು ರೂಪಿಸಿ ಬಿಡುಗಡೆ ಮಾಡಬೇಕು’ ಎಂಬ ನಿರ್ಣಯಕ್ಕೆ ಅಂಗೀಕಾರ ಪಡೆಯಲಾಯಿತು.</p><p><strong>ಇತರ ನಿರ್ಣಯಗಳು:</strong></p><p>*ಕೃಷ್ಣಾ ಮೇಲ್ದಂಡೆ ಯೋಜನೆ– 3 ಅನ್ನು ತಕ್ಷಣ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು. ಜೊತೆಗೆ, ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ–2ರ ಐತೀರ್ಪು ಅನ್ನು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಅಧಿಸೂಚಿಸಿ ಅನುಷ್ಠಾನಗೊಳಿಸಬೇಕು</p><p>*ರಾಯಚೂರು ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪನೆಗೆ ಶೀಘ್ರ ಅಂತಿಮ ಅನುಮೋದನೆ ನೀಡಬೇಕು</p><p>*ಬೆಂಗಳೂರಿನಲ್ಲಿರುವ 73 ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳನ್ನು ಗುರುತಿಸಿ ಅವುಗಳಲ್ಲಿ ಕನಿಷ್ಠ 25 ಪ್ರಮುಖ ಸಂಸ್ಥೆಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ವರ್ಗಾಯಿಸಬೇಕು</p><p>*ಎಥೆನಾಲ್ ಸಾಮರ್ಥ್ಯಕ್ಕೆ ಅನುಗುಣವಾಗಿ ಕೋಟಾ ಹಂಚಿಕೆ ಪ್ರಮಾಣವನ್ನು ತಕ್ಷಣ ಹೆಚ್ಚಿಸುವ ಮೂಲಕ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸಬೇಕು. </p><p>*ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅಗತ್ಯ ಮಂಜೂರಾತಿಗಳನ್ನು ತಕ್ಷಣ ನೀಡಬೇಕು</p><p><strong>‘ಶೇ 56ರಷ್ಟುಮೀಸಲು : 9 ನೇ ಪರಿಚ್ಛೇದಕ್ಕೆ ಸೇರಿಸಿ’:</strong></p><p>‘ರಾಜ್ಯದಲ್ಲಿ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಒಟ್ಟು ಮೀಸಲಾತಿಯನ್ನು ಶೇ 56ಕ್ಕೆ ಹೆಚ್ಚಿಸುವ ಉದ್ದೇಶದಿಂದ ರೂಪಿಸಿರುವ ಕಾಯ್ದೆಯನ್ನು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸಬೇಕು’ ಸೇರಿದಂತೆ ಒಟ್ಟು ಏಳು ನಿರ್ಣಯಗಳನ್ನು ಪರಿಷತ್ತು ಅಂಗೀಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಉತ್ತರ ಕರ್ನಾಟಕ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಸಂಬಂಧ ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ಆರು ನಿರ್ಣಯಗಳನ್ನು ಅಂಗೀಕರಿಸಲಾಯಿತು.</p><p>ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಶುಕ್ರವಾರ ರಾತ್ರಿ 9.50ರ ವೇಳೆಗೆ ಈ ಮಸೂದೆಗಳನ್ನು ಮಂಡಿಸಿದರು.</p><p>‘ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ಯನ್ನು ರಾಷ್ಟ್ರೀಯ ಅಭಿವೃದ್ಧಿಯಾಗಿ ಪರಿಗಣಿಸಿ, ಮಹಾರಾಷ್ಟ್ರದ ವಿದರ್ಭ ಮಾದರಿಯಲ್ಲಿ ಕೇಂದ್ರ ಸರ್ಕಾರ ತಕ್ಷಣ ₹ 5 ಸಾವಿರ ಕೋಟಿಯ ‘ವಿಶೇಷ ಕೇಂದ್ರ ನೆರವು’ ಯೋಜನೆಯನ್ನು ರೂಪಿಸಿ ಬಿಡುಗಡೆ ಮಾಡಬೇಕು’ ಎಂಬ ನಿರ್ಣಯಕ್ಕೆ ಅಂಗೀಕಾರ ಪಡೆಯಲಾಯಿತು.</p><p><strong>ಇತರ ನಿರ್ಣಯಗಳು:</strong></p><p>*ಕೃಷ್ಣಾ ಮೇಲ್ದಂಡೆ ಯೋಜನೆ– 3 ಅನ್ನು ತಕ್ಷಣ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು. ಜೊತೆಗೆ, ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ–2ರ ಐತೀರ್ಪು ಅನ್ನು ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಅಧಿಸೂಚಿಸಿ ಅನುಷ್ಠಾನಗೊಳಿಸಬೇಕು</p><p>*ರಾಯಚೂರು ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪನೆಗೆ ಶೀಘ್ರ ಅಂತಿಮ ಅನುಮೋದನೆ ನೀಡಬೇಕು</p><p>*ಬೆಂಗಳೂರಿನಲ್ಲಿರುವ 73 ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳನ್ನು ಗುರುತಿಸಿ ಅವುಗಳಲ್ಲಿ ಕನಿಷ್ಠ 25 ಪ್ರಮುಖ ಸಂಸ್ಥೆಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ವರ್ಗಾಯಿಸಬೇಕು</p><p>*ಎಥೆನಾಲ್ ಸಾಮರ್ಥ್ಯಕ್ಕೆ ಅನುಗುಣವಾಗಿ ಕೋಟಾ ಹಂಚಿಕೆ ಪ್ರಮಾಣವನ್ನು ತಕ್ಷಣ ಹೆಚ್ಚಿಸುವ ಮೂಲಕ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸಬೇಕು. </p><p>*ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅಗತ್ಯ ಮಂಜೂರಾತಿಗಳನ್ನು ತಕ್ಷಣ ನೀಡಬೇಕು</p><p><strong>‘ಶೇ 56ರಷ್ಟುಮೀಸಲು : 9 ನೇ ಪರಿಚ್ಛೇದಕ್ಕೆ ಸೇರಿಸಿ’:</strong></p><p>‘ರಾಜ್ಯದಲ್ಲಿ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಒಟ್ಟು ಮೀಸಲಾತಿಯನ್ನು ಶೇ 56ಕ್ಕೆ ಹೆಚ್ಚಿಸುವ ಉದ್ದೇಶದಿಂದ ರೂಪಿಸಿರುವ ಕಾಯ್ದೆಯನ್ನು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸಬೇಕು’ ಸೇರಿದಂತೆ ಒಟ್ಟು ಏಳು ನಿರ್ಣಯಗಳನ್ನು ಪರಿಷತ್ತು ಅಂಗೀಕರಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>