ಬೆಳಗಾವಿ: ಕೃಷಿಭೂಮಿಯಲ್ಲಿ ಸ್ವಂತಕ್ಕೆ ಮನೆ, ಕೃಷಿ ಪರಿಕರಗಳನ್ನು ಸಂಗ್ರಹಿಸಿಡಲು ಕಟ್ಟಡ, ತೋಟದ ಮನೆ ನಿರ್ಮಿಸಿಕೊಳ್ಳಲು ಭೂ ಪರಿವರ್ತನೆಗೆ ರೈತರು ಅರ್ಜಿ ಸಲ್ಲಿಸಿದ ಏಳು ದಿನಗಳ ಒಳಗೇ ಮಂಜೂರಾತಿ ಆದೇಶ ನೀಡುವಂತೆ ಜಿಲ್ಲಾಧಿಕಾರಿಗೆ ಗಡುವು ವಿಧಿಸುವ ಉದ್ದೇಶದಿಂದ ಮಂಡಿಸಿದ ‘ಕರ್ನಾಟಕ ಭೂ ಕಂದಾಯಕಾಯ್ದೆ ತಿದ್ದುಪಡಿ‘ ಮಸೂದೆಗೆ ವಿಧಾನಸಭೆಯಲ್ಲಿ ಗುರುವಾರ ಒಪ್ಪಿಗೆ ನೀಡಲಾಯಿತು.