ಕೆಟಿಪಿಪಿ ಕಾಯ್ದೆ–1999ಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಮುಖ್ಯಮಂತ್ರಿ ಪರವಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ ಮಂಡಿಸಿದರು. ಚರ್ಚೆಯ ವೇಳೆ ಮಾತನಾಡಿದ ಬಿಜೆಪಿಯ ಪಿ.ಎಚ್. ಪೂಜಾರ, ಎನ್.ರವಿಕುಮಾರ್, ಪ್ರತಾಪ್ ಸಿಂಹ ನಾಯಕ್, ಕೇಶವಪ್ರಸಾದ್, ಎಚ್.ವಿಶ್ವನಾಥ್, ಜೆಡಿಎಸ್ನ ಕೆ.ಎ. ತಿಪ್ಪೇಸ್ವಾಮಿ, ಕಾಂಗ್ರೆಸ್ನ ನಾಗರಾಜ್ ಯಾದವ್, ಉಮಾಶ್ರೀ, ‘ಇದೊಂದು ಕ್ರಾಂತಿಕಾರಕ ಮಸೂದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು. ಮೀಸಲಾತಿ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಬೇಕು’ ಎಂದು ಮನವಿ ಮಾಡಿದರು.