ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಮೋಹನ್ ಕಾತರಕಿ ಲಾಬಿ ನಡೆಸಿದ್ದಾರೆ. ತಮ್ಮನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
34 ವರ್ಷಗಳಿಂದ ಸುಪ್ರೀಂ ಕೋರ್ಟ್ನ ವಕೀಲರಾಗಿರುವ ಅವರು, ಕಾವೇರಿ, ಕೃಷ್ಣಾ ಹಾಗೂ ಮಹದಾಯಿ ಜಲವಿವಾದಗಳಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಿದ್ದಾರೆ.
‘ನಾನು 1985ರಿಂದಲೂ ಕಾಂಗ್ರೆಸ್ ಪಕ್ಷದ ಜತೆಗೆ ನಂಟು ಹೊಂದಿದ್ದು, ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದರೆ ಗೆಲುವಿನ ಸಾಧ್ಯತೆ ಹೆಚ್ಚು. ಪಕ್ಷದ ಟಿಕೆಟ್ಗಾಗಿ ಅರ್ಜಿ ಸಲ್ಲಿಸಲು ಸಿದ್ಧ’ ಎಂದು ಅವರು ಹೇಳಿದ್ದಾರೆ.