‘ಬೆಂಕಿಯಿಂದಾಗಿ ಅಡುಗೆ ಅನಿಲದ ಸಿಲಿಂಡರ್ಗಳೂ ಸಿಡಿಯಲಾರಂಭಿಸಿದವು. ನಾವು ತಕ್ಷಣವೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಮಾಹಿತಿ ನೀಡಿದೆವು. ಬೆಳ್ಳಂದೂರು ಆಸುಪಾಸಿನ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚು ಇದ್ದುದರಿಂದ ಅಗ್ನಿಶಾಮಕ ವಾಹನ ಸ್ಥಳಕ್ಕೆ ತಲುಪುವಾಗ ವಿಳಂಬವಾಯಿತು. ಬಹುತೇಕ ಜೋಪಡಿಗಳು ಸರ್ವನಾಶವಾಗಿವೆ’ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದರು.