ಬೆಂಗಳೂರು: ದ.ರಾ. ಬೇಂದ್ರೆ ಕಾವ್ಯ ಕೂಟ ನೀಡುವ ‘ದ.ರಾ. ಬೇಂದ್ರೆ ಸಾಹಿತ್ಯ ಸೇವಾ ಪ್ರಶಸ್ತಿ’ಗೆ ಉದಯಭಾನು ಕಲಾಸಂಘದ ಕಾರ್ಯದರ್ಶಿ ಎಂ. ನರಸಿಂಹ ಆಯ್ಕೆಯಾಗಿದ್ದಾರೆ.
ಕೂಟವು ಇದೇ ಮೊದಲ ಬಾರಿ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಒಳಗೊಂಡಿದೆ. ಇದೇ 31ರಂದು ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುವ ಬೇಂದ್ರೆ ಅವರ 127ನೇ ಜನ್ಮದಿನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೂಟದ ಅಧ್ಯಕ್ಷ ಜಿ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.