<p>ದೇವನಹಳ್ಳಿ: ಬ್ಯಾಂಕಾಕ್ನಿಂದ ಜೀವಂತ ಪ್ರಾಣಿಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದು, 47 ವಿವಿಧ ಜೀವಿಗಳನ್ನು ರಕ್ಷಿಸಿದ್ದಾರೆ.</p>.<p>ಪ್ರಯಾಣಿಕನ ಬ್ಯಾಗ್ ತಪಾಸಣೆ ವೇಳೆ 47 ಅಪರೂಪದ ಜೀವಿಗಳು ಪತ್ತೆಯಾಗಿವೆ. ಕೆಂಪು ಕಾಲಿನ ಆಮೆ (ರೆಡ್–ಫುಟೆಡ್ ಟಾರ್ಟಾಯಿಸ್), ಸುಲ್ಕಾಟಾ ಆಮೆ (ಆಫ್ರಿಕನ್ ಸ್ಪರ್ಡ್ ಟಾರ್ಟಾಯಿಸ್), ಅರ್ಜೆಂಟೈನ್ ಬ್ಲ್ಯಾಕ್ ಅಂಡ್ ವೈಟ್ ಟೆಗು(ಹಲ್ಲಿ) ಹಾಗೂ ಗೋಲ್ಡೀಸ್ ಮಾರ್ಮೊಸೆಟ್(ಅಪರೂಪದ ಕೋತಿ) ಬ್ಯಾಗ್ನಲ್ಲಿದ್ದವು.</p>.<p>ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಪ್ರಯಾಣಿಕ ಮತ್ತು ವನ್ಯಜೀವಿಗಳನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಅರಣ್ಯ ವ್ಯಾಪ್ತಿ ಅಧಿಕಾರಿ (ಆರ್ಎಫ್ಒ) ಅವರಿಗೆ ಒಪ್ಪಿಸಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-51-1509554776</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಬ್ಯಾಂಕಾಕ್ನಿಂದ ಜೀವಂತ ಪ್ರಾಣಿಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದು, 47 ವಿವಿಧ ಜೀವಿಗಳನ್ನು ರಕ್ಷಿಸಿದ್ದಾರೆ.</p>.<p>ಪ್ರಯಾಣಿಕನ ಬ್ಯಾಗ್ ತಪಾಸಣೆ ವೇಳೆ 47 ಅಪರೂಪದ ಜೀವಿಗಳು ಪತ್ತೆಯಾಗಿವೆ. ಕೆಂಪು ಕಾಲಿನ ಆಮೆ (ರೆಡ್–ಫುಟೆಡ್ ಟಾರ್ಟಾಯಿಸ್), ಸುಲ್ಕಾಟಾ ಆಮೆ (ಆಫ್ರಿಕನ್ ಸ್ಪರ್ಡ್ ಟಾರ್ಟಾಯಿಸ್), ಅರ್ಜೆಂಟೈನ್ ಬ್ಲ್ಯಾಕ್ ಅಂಡ್ ವೈಟ್ ಟೆಗು(ಹಲ್ಲಿ) ಹಾಗೂ ಗೋಲ್ಡೀಸ್ ಮಾರ್ಮೊಸೆಟ್(ಅಪರೂಪದ ಕೋತಿ) ಬ್ಯಾಗ್ನಲ್ಲಿದ್ದವು.</p>.<p>ಕಸ್ಟಮ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮುಂದಿನ ಕ್ರಮಕ್ಕಾಗಿ ಪ್ರಯಾಣಿಕ ಮತ್ತು ವನ್ಯಜೀವಿಗಳನ್ನು ಬೆಂಗಳೂರು ಗ್ರಾಮಾಂತರ ವಿಭಾಗದ ಅರಣ್ಯ ವ್ಯಾಪ್ತಿ ಅಧಿಕಾರಿ (ಆರ್ಎಫ್ಒ) ಅವರಿಗೆ ಒಪ್ಪಿಸಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-51-1509554776</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>