<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರವು ‘ವಿಶೇಷ ಸಮಗ್ರ ಪರಿಷ್ಕರಣೆ’ಯನ್ನು (ಎಸ್ಐಆರ್) ತಿರಸ್ಕರಿಸಬೇಕು.2027ರ ಜನಗಣತಿವರೆಗೆ ಈ ಪ್ರಕ್ರಿಯೆ ನಿಲ್ಲಿಸಬೇಕು’ ಎಂದು ಸಿವಿಕ್ ಬೆಂಗಳೂರು ಸಂಸ್ಥೆ ಆಗ್ರಹಿಸಿದೆ.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿಸಂಸ್ಥೆಯ ಪರವಾಗಿ ಮಾತನಾಡಿದ ತ್ರಿಲೋಚನ್ ಶಾಸ್ತ್ರಿ, ‘ಎಸ್ಐಆರ್ ಜಾರಿ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆಯಬೇಕಿದೆ. ಆತುರದಲ್ಲಿ ಈ ಪ್ರಕ್ರಿಯೆ ಜಾರಿ ಮಾಡುವುದು ಸರಿಯಲ್ಲ’ ಎಂದರು.</p>.<p>‘ಈ ಪ್ರಕ್ರಿಯೆಯನ್ನು ಸಮಗ್ರವಾಗಿ ಪರಿಶೀಲಿಸಬೇಕಾದ ಅಗತ್ಯವಿದೆ. 2027ರ ಜನಗಣತಿ ಪ್ರಕ್ರಿಯೆ ಮುಗಿಯುವ ತನಕ ಎಸ್ಐಆರ್ ಪ್ರಕ್ರಿಯೆ ನಿಲ್ಲಿಸಿ, ಜನಗಣತಿಯ ದತ್ತಾಂಶವನ್ನು ಹೊಸ ಮತದಾರರ ಪಟ್ಟಿ ರಚಿಸಲು ಬಳಸಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>‘ಎಸ್ಐಆರ್ ವಿರುದ್ಧ ರಾಜ್ಯ ಸರ್ಕಾರ ದೃಢ ನಿಲುವು ಕೈಗೊಳ್ಳಬೇಕು. ಮತ ಹಕ್ಕು ಕಾಪಾಡಲು ಕಾನೂನು ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಶಿಫಾರಸು ಪಡೆದು, ಅದರಂತೆ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು.ಸಿವಿಕ್ ಬೆಂಗಳೂರು ಸಂಸ್ಥೆಯ ಕಾರ್ಯನಿರ್ವಾಹಕ ಟ್ರಸ್ಟಿ ಕಾತ್ಯಾಯಿನಿ ಚಾಮರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯ ಸರ್ಕಾರವು ‘ವಿಶೇಷ ಸಮಗ್ರ ಪರಿಷ್ಕರಣೆ’ಯನ್ನು (ಎಸ್ಐಆರ್) ತಿರಸ್ಕರಿಸಬೇಕು.2027ರ ಜನಗಣತಿವರೆಗೆ ಈ ಪ್ರಕ್ರಿಯೆ ನಿಲ್ಲಿಸಬೇಕು’ ಎಂದು ಸಿವಿಕ್ ಬೆಂಗಳೂರು ಸಂಸ್ಥೆ ಆಗ್ರಹಿಸಿದೆ.</p>.<p>ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿಸಂಸ್ಥೆಯ ಪರವಾಗಿ ಮಾತನಾಡಿದ ತ್ರಿಲೋಚನ್ ಶಾಸ್ತ್ರಿ, ‘ಎಸ್ಐಆರ್ ಜಾರಿ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆಯಬೇಕಿದೆ. ಆತುರದಲ್ಲಿ ಈ ಪ್ರಕ್ರಿಯೆ ಜಾರಿ ಮಾಡುವುದು ಸರಿಯಲ್ಲ’ ಎಂದರು.</p>.<p>‘ಈ ಪ್ರಕ್ರಿಯೆಯನ್ನು ಸಮಗ್ರವಾಗಿ ಪರಿಶೀಲಿಸಬೇಕಾದ ಅಗತ್ಯವಿದೆ. 2027ರ ಜನಗಣತಿ ಪ್ರಕ್ರಿಯೆ ಮುಗಿಯುವ ತನಕ ಎಸ್ಐಆರ್ ಪ್ರಕ್ರಿಯೆ ನಿಲ್ಲಿಸಿ, ಜನಗಣತಿಯ ದತ್ತಾಂಶವನ್ನು ಹೊಸ ಮತದಾರರ ಪಟ್ಟಿ ರಚಿಸಲು ಬಳಸಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.</p>.<p>‘ಎಸ್ಐಆರ್ ವಿರುದ್ಧ ರಾಜ್ಯ ಸರ್ಕಾರ ದೃಢ ನಿಲುವು ಕೈಗೊಳ್ಳಬೇಕು. ಮತ ಹಕ್ಕು ಕಾಪಾಡಲು ಕಾನೂನು ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಶಿಫಾರಸು ಪಡೆದು, ಅದರಂತೆ ಕ್ರಮ ವಹಿಸಬೇಕು’ ಎಂದು ಆಗ್ರಹಿಸಿದರು.ಸಿವಿಕ್ ಬೆಂಗಳೂರು ಸಂಸ್ಥೆಯ ಕಾರ್ಯನಿರ್ವಾಹಕ ಟ್ರಸ್ಟಿ ಕಾತ್ಯಾಯಿನಿ ಚಾಮರಾಜ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>