<p><strong>ಬೆಂಗಳೂರು:</strong> ‘ರಾಜ್ಯದ ಹಲವೆಡೆ ಕಾಂಗ್ರೆಸ್ ಭವನಗಳನ್ನು ನಿರ್ಮಿಸಲು ಕಾನೂನುಬಾಹಿರವಾಗಿ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಇದರ ವಿರುದ್ಧ ಹೋರಾಟ ನಡೆಸುತ್ತೇವೆ’ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಹೇಳಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರುಣ್, ‘ರಾಜಕೀಯ ಪಕ್ಷಗಳಿಗೆ ಸಿಎ ನಿವೇಶನ ಗಳನ್ನು ನೀಡಬಾರದು ಎಂಬ ನಿಯಮವಿದೆ. ಹೀಗಿದ್ದೂ ಕಾಂಗ್ರೆಸ್ ತನಗೆ ತಾನೇ ನಿವೇಶನಗಳನ್ನು ಹಂಚಿಕೆ ಮಾಡಿಕೊಂಡಿದೆ’ ಎಂದರು.</p>.<p>‘ಅಧಿಕಾರಿಗಳ ವಿರೋಧವಿದ್ದರೂ ಮಾರ್ಗಸೂಚಿ ದರದ ಶೇ 5ರಷ್ಟು ಹಣ ಪಡೆದು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟುಮಾಡಲಾಗಿದೆ. ಈ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಕೇಳಿದ್ದ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾರಿಕೆ ಉತ್ತರ ನೀಡಿದ್ದರು. ಆದರೆ, ಸರ್ಕಾರದ ನಡೆಗೆ ಈಗ ಹೈಕೋರ್ಟ್ ಛೀಮಾರಿ ಹಾಕಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-4-624028768</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದ ಹಲವೆಡೆ ಕಾಂಗ್ರೆಸ್ ಭವನಗಳನ್ನು ನಿರ್ಮಿಸಲು ಕಾನೂನುಬಾಹಿರವಾಗಿ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಇದರ ವಿರುದ್ಧ ಹೋರಾಟ ನಡೆಸುತ್ತೇವೆ’ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಹೇಳಿದರು.</p>.<p>ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರುಣ್, ‘ರಾಜಕೀಯ ಪಕ್ಷಗಳಿಗೆ ಸಿಎ ನಿವೇಶನ ಗಳನ್ನು ನೀಡಬಾರದು ಎಂಬ ನಿಯಮವಿದೆ. ಹೀಗಿದ್ದೂ ಕಾಂಗ್ರೆಸ್ ತನಗೆ ತಾನೇ ನಿವೇಶನಗಳನ್ನು ಹಂಚಿಕೆ ಮಾಡಿಕೊಂಡಿದೆ’ ಎಂದರು.</p>.<p>‘ಅಧಿಕಾರಿಗಳ ವಿರೋಧವಿದ್ದರೂ ಮಾರ್ಗಸೂಚಿ ದರದ ಶೇ 5ರಷ್ಟು ಹಣ ಪಡೆದು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟುಮಾಡಲಾಗಿದೆ. ಈ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಕೇಳಿದ್ದ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾರಿಕೆ ಉತ್ತರ ನೀಡಿದ್ದರು. ಆದರೆ, ಸರ್ಕಾರದ ನಡೆಗೆ ಈಗ ಹೈಕೋರ್ಟ್ ಛೀಮಾರಿ ಹಾಕಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-4-624028768</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>