<p><strong>ಹಗರಿಬೊಮ್ಮನಹಳ್ಳಿ</strong>: ಕನಿಷ್ಠ ವೇತನ ₹36ಸಾವಿರ ಜಾರಿಗೆ ಆಗ್ರಹಿಸಿ, ನಿವೃತ್ತಿಯವರೆಗೆ ಸೇವಾ ಭದ್ರತೆಗೆ ಮತ್ತು ಸೇವಾ ಕಾಯಂಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರ ಗುತ್ತಿಗೆ ನೌಕರರು ಮೇ 25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟ ಮುಷ್ಕರ ಆರಂಭಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮರಡಿ ಜಂಬಯ್ಯ ನಾಯಕ ಹೇಳಿದರು.</p>.<p>ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಮೂರು ತಾಲ್ಲೂಕುಗಳ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಘದ ಸಂಸ್ಥೆಗಳ ಹಾಸ್ಟೆಲ್ ಗಳಲ್ಲಿ ಕಳೆದ 15-20 ವರ್ಷಗಳಿಂದ ಹೊರ ಗುತ್ತಿಗೆ ನೌಕರರಾಗಿ ಅಡುಗೆಯವರಾಗಿ, ಅಡುಗೆ ಸಹಾಯಕರಾಗಿ, ಸ್ವಚ್ಛತಾಗಾರರಾಗಿ, ಕಾವಲುಗಾರರಾಗಿ, ಅಟೆಂಡರ್ ಗಳಾಗಿ, ಕಂಪ್ಯೂಟರ್ ಅಪರೇಟರ್ ಗಳಾಗಿ, ಡಾಟಾ ಎಂಟ್ರಿ ಅಸಪರೇಟರುಗಳಾಗಿ , ಅತಿಥಿ ಶಿಕ್ಷಕರಾಗಿ ಜೀವನಕ್ಕೆ ಯಾವುದೇ ಭದ್ರತಾ ಇಲ್ಲದೇ ದುಡಿಯುತ್ತಾ ಬಂದಿದ್ದಾರೆ. ಕನಿಷ್ಠ ವೇತನ ₹36ಸಾವಿರ ರೂಪಾಯಿಗಳನ್ನು ಕೊಡಬೇಕು, ನಿವೃತ್ತಿ ಅವಧಿಯವರೆಗೂ ಸೇವಾ ಭದ್ರತೆ ನೀಡಬೇಕು, ಕೆಲಸ ಮಾಡುವ ಸ್ಥಳದಲ್ಲೇ ಕಾಯಂ ಮಾಡಬೇಕು ಹಾಗೂ ತಮ್ಮ ಇತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.</p>.<p>ಹೂವಿನಹಡಗಲಿ, ಹರಪನಹಳ್ಳಿ ಮತ್ತು ತಾಲ್ಲೂಕಿನ ಸಂಘದ ಪದಾಧಿಕಾರಿಗಳು ಇದ್ದರು. ರಾಜ್ಯ ಅಂಗವಿಕಲರು ಹಾಗೂ ಪಾಲಕರ ಒಕ್ಕೂಟದ ರಂಗಪ್ಪ ದಾಸರ್, ಜನವಾದಿ ಮಹಿಳಾ ಸಂಘಟನೆಯ ಸರ್ದಾರ ಹುಲಿಗೆಮ್ಮ ಹಾಗೂ ನೌಕರರ ಒಕ್ಕೂಟದ ರಂಗನಾಥ ಹವಲ್ದಾರ್ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-130296393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ</strong>: ಕನಿಷ್ಠ ವೇತನ ₹36ಸಾವಿರ ಜಾರಿಗೆ ಆಗ್ರಹಿಸಿ, ನಿವೃತ್ತಿಯವರೆಗೆ ಸೇವಾ ಭದ್ರತೆಗೆ ಮತ್ತು ಸೇವಾ ಕಾಯಂಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರ ಗುತ್ತಿಗೆ ನೌಕರರು ಮೇ 25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟ ಮುಷ್ಕರ ಆರಂಭಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮರಡಿ ಜಂಬಯ್ಯ ನಾಯಕ ಹೇಳಿದರು.</p>.<p>ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಮೂರು ತಾಲ್ಲೂಕುಗಳ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಘದ ಸಂಸ್ಥೆಗಳ ಹಾಸ್ಟೆಲ್ ಗಳಲ್ಲಿ ಕಳೆದ 15-20 ವರ್ಷಗಳಿಂದ ಹೊರ ಗುತ್ತಿಗೆ ನೌಕರರಾಗಿ ಅಡುಗೆಯವರಾಗಿ, ಅಡುಗೆ ಸಹಾಯಕರಾಗಿ, ಸ್ವಚ್ಛತಾಗಾರರಾಗಿ, ಕಾವಲುಗಾರರಾಗಿ, ಅಟೆಂಡರ್ ಗಳಾಗಿ, ಕಂಪ್ಯೂಟರ್ ಅಪರೇಟರ್ ಗಳಾಗಿ, ಡಾಟಾ ಎಂಟ್ರಿ ಅಸಪರೇಟರುಗಳಾಗಿ , ಅತಿಥಿ ಶಿಕ್ಷಕರಾಗಿ ಜೀವನಕ್ಕೆ ಯಾವುದೇ ಭದ್ರತಾ ಇಲ್ಲದೇ ದುಡಿಯುತ್ತಾ ಬಂದಿದ್ದಾರೆ. ಕನಿಷ್ಠ ವೇತನ ₹36ಸಾವಿರ ರೂಪಾಯಿಗಳನ್ನು ಕೊಡಬೇಕು, ನಿವೃತ್ತಿ ಅವಧಿಯವರೆಗೂ ಸೇವಾ ಭದ್ರತೆ ನೀಡಬೇಕು, ಕೆಲಸ ಮಾಡುವ ಸ್ಥಳದಲ್ಲೇ ಕಾಯಂ ಮಾಡಬೇಕು ಹಾಗೂ ತಮ್ಮ ಇತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.</p>.<p>ಹೂವಿನಹಡಗಲಿ, ಹರಪನಹಳ್ಳಿ ಮತ್ತು ತಾಲ್ಲೂಕಿನ ಸಂಘದ ಪದಾಧಿಕಾರಿಗಳು ಇದ್ದರು. ರಾಜ್ಯ ಅಂಗವಿಕಲರು ಹಾಗೂ ಪಾಲಕರ ಒಕ್ಕೂಟದ ರಂಗಪ್ಪ ದಾಸರ್, ಜನವಾದಿ ಮಹಿಳಾ ಸಂಘಟನೆಯ ಸರ್ದಾರ ಹುಲಿಗೆಮ್ಮ ಹಾಗೂ ನೌಕರರ ಒಕ್ಕೂಟದ ರಂಗನಾಥ ಹವಲ್ದಾರ್ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-25-130296393</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>