<p><strong>ಬೆಂಗಳೂರು</strong>: ‘ಮುಸ್ಲಿಂ ಪ್ರಿಯಕರನ ಜೊತೆ ಬದುಕಲು ನಿಶ್ಚಯಿಸಿರುವ ನನ್ನ 21 ವರ್ಷದ ಪುತ್ರಿಯ ಮಾನಸಿಕ ಆರೋಗ್ಯ ಮೌಲ್ಯಮಾಪನ ನಡೆಸಲು ನಿರ್ದೇಶಿಸಬೇಕು’ ಎಂದು ಕೋರಿದ್ದ ತಾಯಿಯೊಬ್ಬರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.</p>.<p>‘ನಾಪತ್ತೆಯಾಗಿರುವ ಪುತ್ರಿಯನ್ನು ಪತ್ತೆ ಮಾಡಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಸಿಖ್ ಸಮುದಾಯದ ಯುವತಿಯ ತಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ರಜಾಕಾಲದ ನ್ಯಾಯಮೂರ್ತಿ ಸೂರಜ್ಗೋವಿಂದ ರಾಜ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದ ಯುವತಿ, ‘ನನ್ನಪೋಷಕರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕೆಲವರು ಒತ್ತಡ ಹೇರಿದ್ದ ಹಿನ್ನೆಲೆಯಲ್ಲಿ ನನ್ನ ಪ್ರಿಯತಮ ಅತ್ಯಾಚಾರ ಎಸಗಿ, ಮತಾಂತರಕ್ಕೆ ಒತ್ತಾಯಿಸಿದ್ದಾನೆ ಎಂದು ಪತ್ರ ಬರೆದಿದ್ದೆ’ ಎಂದರು.</p>.<p>‘ಪತ್ರದಲ್ಲಿ ಬರೆದಿರುವ ಮತಾಂತರ ಮತ್ತು ಅತ್ಯಾಚಾರ ಆರೋಪಗಳು ಸತ್ಯಅಲ್ಲ. ನನಗೆ ಬೆದರಿಕೆ ಹಾಕಿ, ಆ ಪತ್ರ ಬರೆಯುವಂತೆ ಮಾಡಲಾಗಿತ್ತು’ ಎಂದು ವಿವರಿಸಿದರು.</p>.<p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಯುವತಿ ಸ್ವ ಇಚ್ಛೆಯಿಂದ ತನ್ನ ಪ್ರಿಯತಮನ ಜೊತೆ ವಾಸ ಮಾಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ವಯಸ್ಕ ಯುವತಿಯ ಒಪ್ಪಿಗೆಗೆ ವಿರುದ್ಧವಾಗಿ ಮಾನಸಿಕ ಆರೋಗ್ಯ ಮೌಲ್ಯಮಾಪನ ನಡೆಸಲಾಗದು. ಅಂತೆಯೇ, ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ’ ಎಂದು ಆದೇಶಿಸಿತು. ತಾಯಿಯ ಪರ ಹೈಕೋರ್ಟ್ ವಕೀಲ ಪಿ.ರಾಹುಲ್ ಕೃಷ್ಣಾರೆಡ್ಡಿ ವಾದ ಮಂಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-51-617838191</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮುಸ್ಲಿಂ ಪ್ರಿಯಕರನ ಜೊತೆ ಬದುಕಲು ನಿಶ್ಚಯಿಸಿರುವ ನನ್ನ 21 ವರ್ಷದ ಪುತ್ರಿಯ ಮಾನಸಿಕ ಆರೋಗ್ಯ ಮೌಲ್ಯಮಾಪನ ನಡೆಸಲು ನಿರ್ದೇಶಿಸಬೇಕು’ ಎಂದು ಕೋರಿದ್ದ ತಾಯಿಯೊಬ್ಬರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.</p>.<p>‘ನಾಪತ್ತೆಯಾಗಿರುವ ಪುತ್ರಿಯನ್ನು ಪತ್ತೆ ಮಾಡಲು ಪೊಲೀಸರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಸಿಖ್ ಸಮುದಾಯದ ಯುವತಿಯ ತಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ರಜಾಕಾಲದ ನ್ಯಾಯಮೂರ್ತಿ ಸೂರಜ್ಗೋವಿಂದ ರಾಜ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದ ಯುವತಿ, ‘ನನ್ನಪೋಷಕರು ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕೆಲವರು ಒತ್ತಡ ಹೇರಿದ್ದ ಹಿನ್ನೆಲೆಯಲ್ಲಿ ನನ್ನ ಪ್ರಿಯತಮ ಅತ್ಯಾಚಾರ ಎಸಗಿ, ಮತಾಂತರಕ್ಕೆ ಒತ್ತಾಯಿಸಿದ್ದಾನೆ ಎಂದು ಪತ್ರ ಬರೆದಿದ್ದೆ’ ಎಂದರು.</p>.<p>‘ಪತ್ರದಲ್ಲಿ ಬರೆದಿರುವ ಮತಾಂತರ ಮತ್ತು ಅತ್ಯಾಚಾರ ಆರೋಪಗಳು ಸತ್ಯಅಲ್ಲ. ನನಗೆ ಬೆದರಿಕೆ ಹಾಕಿ, ಆ ಪತ್ರ ಬರೆಯುವಂತೆ ಮಾಡಲಾಗಿತ್ತು’ ಎಂದು ವಿವರಿಸಿದರು.</p>.<p>ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಯುವತಿ ಸ್ವ ಇಚ್ಛೆಯಿಂದ ತನ್ನ ಪ್ರಿಯತಮನ ಜೊತೆ ವಾಸ ಮಾಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ವಯಸ್ಕ ಯುವತಿಯ ಒಪ್ಪಿಗೆಗೆ ವಿರುದ್ಧವಾಗಿ ಮಾನಸಿಕ ಆರೋಗ್ಯ ಮೌಲ್ಯಮಾಪನ ನಡೆಸಲಾಗದು. ಅಂತೆಯೇ, ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲು ಬಯಸುವುದಿಲ್ಲ’ ಎಂದು ಆದೇಶಿಸಿತು. ತಾಯಿಯ ಪರ ಹೈಕೋರ್ಟ್ ವಕೀಲ ಪಿ.ರಾಹುಲ್ ಕೃಷ್ಣಾರೆಡ್ಡಿ ವಾದ ಮಂಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-51-617838191</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>