<p><strong>ಬೆಂಗಳೂರು:</strong> ನಗರಾಭಿವೃದ್ಧಿ ಪ್ರಾಧಿಕಾರಗಳು ಹಂಚಿಕೆ ಮಾಡುವ ನಿವೇಶನಗಳಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಕೋಟಾ ನಿಗದಿ ಮಾಡಲು ಹಾಗೂ ಹಂಚಿಕೆಯಾದ ನಿವೇಶನದ ಮೌಲ್ಯದಲ್ಲಿ ಶೇ 25ರಷ್ಟು ರಿಯಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p>‘ಕರ್ನಾಟಕ ರಾಜ್ಯ ವಿಕಲಚೇತನರ ಸಂಘಟನೆ’ ಕಾರ್ಯಾಧ್ಯಕ್ಷ ಚಂದ್ರಶೇಖರ ಪುಟ್ಟಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂಗವಿಕಲರ ಹಕ್ಕುಗಳ ಕಾಯ್ದೆ–2016ರ ಸೆಕ್ಷನ್-37ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ಈ ಕಾಯಿದೆಯು ಅಂಗವಿಕಲರಿಗೆ ವಸತಿ ಮತ್ತು ಅಭಿವೃದ್ಧಿ ಯೋಜನೆಗಳಲ್ಲಿ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುತ್ತದೆ. ಹೈಕೋರ್ಟ್ ಸೂಚನೆ ಯಂತೆ ನಗರಾಭಿವೃದ್ಧಿ ಇಲಾಖೆಯು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಿವೇಶನಗಳ ಹಂಚಿಕೆ) ನಿಯಮ–1991'ಕ್ಕೆ ತಿದ್ದುಪಡಿ ತಂದು ಹೊಸ ಅಧಿಸೂಚನೆಯನ್ನು ಹೊರಡಿಸಿದೆ.</p>.<p>ಅಂಗವಿಕಲರ ಕೋಟಾದಲ್ಲಿ ನಿವೇಶನ ಹಂಚಿಕೆ ಮಾಡುವಾಗ ಅಂಗವಿಕಲ ಮಹಿಳೆಯರಿಗೂ ಸೂಕ್ತ ಆದ್ಯತೆ ನೀಡಬೇಕು ಎಂದು ಹೇಳಿದೆ. ಈ ಅಧಿಸೂಚನೆಯು ವಸತಿಗಷ್ಟೇ ಸೀಮಿತವಾಗದೆ, ಸ್ವಯಂ ಉದ್ಯೋಗ, ವ್ಯಾಪಾರ ಅಥವಾ ಉತ್ಪಾದನಾ ಕೇಂದ್ರಗಳ ಸ್ಥಾಪನೆ, ರಿಯಾಯಿತಿ ದರದಲ್ಲಿ ಭೂಮಿ ಪಡೆಯಲೂ ಸಹಕಾರಿಯಾಗಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1928122027</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರಾಭಿವೃದ್ಧಿ ಪ್ರಾಧಿಕಾರಗಳು ಹಂಚಿಕೆ ಮಾಡುವ ನಿವೇಶನಗಳಲ್ಲಿ ಅಂಗವಿಕಲರಿಗೆ ಶೇ 5ರಷ್ಟು ಕೋಟಾ ನಿಗದಿ ಮಾಡಲು ಹಾಗೂ ಹಂಚಿಕೆಯಾದ ನಿವೇಶನದ ಮೌಲ್ಯದಲ್ಲಿ ಶೇ 25ರಷ್ಟು ರಿಯಾಯಿತಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p>‘ಕರ್ನಾಟಕ ರಾಜ್ಯ ವಿಕಲಚೇತನರ ಸಂಘಟನೆ’ ಕಾರ್ಯಾಧ್ಯಕ್ಷ ಚಂದ್ರಶೇಖರ ಪುಟ್ಟಪ್ಪ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಅಂಗವಿಕಲರ ಹಕ್ಕುಗಳ ಕಾಯ್ದೆ–2016ರ ಸೆಕ್ಷನ್-37ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ಈ ಕಾಯಿದೆಯು ಅಂಗವಿಕಲರಿಗೆ ವಸತಿ ಮತ್ತು ಅಭಿವೃದ್ಧಿ ಯೋಜನೆಗಳಲ್ಲಿ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುತ್ತದೆ. ಹೈಕೋರ್ಟ್ ಸೂಚನೆ ಯಂತೆ ನಗರಾಭಿವೃದ್ಧಿ ಇಲಾಖೆಯು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ನಿವೇಶನಗಳ ಹಂಚಿಕೆ) ನಿಯಮ–1991'ಕ್ಕೆ ತಿದ್ದುಪಡಿ ತಂದು ಹೊಸ ಅಧಿಸೂಚನೆಯನ್ನು ಹೊರಡಿಸಿದೆ.</p>.<p>ಅಂಗವಿಕಲರ ಕೋಟಾದಲ್ಲಿ ನಿವೇಶನ ಹಂಚಿಕೆ ಮಾಡುವಾಗ ಅಂಗವಿಕಲ ಮಹಿಳೆಯರಿಗೂ ಸೂಕ್ತ ಆದ್ಯತೆ ನೀಡಬೇಕು ಎಂದು ಹೇಳಿದೆ. ಈ ಅಧಿಸೂಚನೆಯು ವಸತಿಗಷ್ಟೇ ಸೀಮಿತವಾಗದೆ, ಸ್ವಯಂ ಉದ್ಯೋಗ, ವ್ಯಾಪಾರ ಅಥವಾ ಉತ್ಪಾದನಾ ಕೇಂದ್ರಗಳ ಸ್ಥಾಪನೆ, ರಿಯಾಯಿತಿ ದರದಲ್ಲಿ ಭೂಮಿ ಪಡೆಯಲೂ ಸಹಕಾರಿಯಾಗಲಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-51-1928122027</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>