<p><strong>ಬೆಂಗಳೂರು:</strong> ಇ–ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p>.<p>ಸೋಮವಾರ ಅವರು ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಇ–ಸ್ವತ್ತು ತಂತ್ರಾಂಶದ ಕಾರ್ಯನಿರ್ವಹಣೆ ಮತ್ತು ಪ್ರಗತಿ ಪರಿಶೀಲಿಸಿದರು.</p>.<p>ಅಲ್ಲದೇ, ಹೊಸ ನಮೂನೆ 11 ಬಿ ಗೆ ಸಂಬಂಧಿಸಿದಂತೆ ಈವರೆಗೆ 76,093 ಅರ್ಜಿಗಳು ಸ್ವೀಕೃತವಾಗಿವೆ. ಈ ಅರ್ಜಿಗಳು ವಿವಿಧ ಹಂತಗಳಲ್ಲಿ ಅನುಮೋದನೆಗೆ ಬಾಕಿ ಉಳಿದಿವೆ. ಈ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಲ್ಲಿ ಕ್ರಮವಹಿಸಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.ಇ–ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರ ಅರ್ಜಿಗಳನ್ನು ಅನುಮೋದನೆ ಮಾಡುವ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಕಾರಣ ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<blockquote>ಬಗೆಹರಿದಿರುವ ಸಮಸ್ಯೆಗಳು: </blockquote>.<p>l ನಮೂನೆ–11 ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ</p>.<p>l ಹೊಸ ಬಹುಮಹಡಿ (ಅಪಾರ್ಟ್ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತು ಸೆಂಟ್ಸ್ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಋಣಭಾರ ಪ್ರಮಾಣಪತ್ರ (ಇಸಿ) ಗಳನ್ನು ಸಲ್ಲಿಸಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸೇವ್ ಮಾಡಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಇ-ಖಾತಾಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಇದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳೊಂದಿಗೆ ಮಾಡಲಾಗಿದ್ದ ಸಂಯೋಜನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಗ್ರಾಮ ಪಂಚಾಯತಿ ಬಳಕೆದಾರರುಗಳ ಲಾಗಿನ್ ನಲ್ಲಿ ಅರ್ಜಿಗಳ ಅನುಮೋದನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ</p>.<p>ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ ದಿನದೊಳಗೆ ಕ್ರಮವಹಿಸಲಾಗುವುದು ಎಂದು ಪ್ರಿಯಾಂಕ್ ತಿಳಿಸಿದ್ದಾರೆ.</p>.<p><strong>ವಿವರಗಳಿಗೆ</strong>– https://eswathu.karnataka.gov.in/Login.aspx ಮತ್ತು https://panchatantra.karnataka.gov.in ಸಹಾಯವಾಣಿ : 9483476000</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇ–ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.</p>.<p>ಸೋಮವಾರ ಅವರು ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಇ–ಸ್ವತ್ತು ತಂತ್ರಾಂಶದ ಕಾರ್ಯನಿರ್ವಹಣೆ ಮತ್ತು ಪ್ರಗತಿ ಪರಿಶೀಲಿಸಿದರು.</p>.<p>ಅಲ್ಲದೇ, ಹೊಸ ನಮೂನೆ 11 ಬಿ ಗೆ ಸಂಬಂಧಿಸಿದಂತೆ ಈವರೆಗೆ 76,093 ಅರ್ಜಿಗಳು ಸ್ವೀಕೃತವಾಗಿವೆ. ಈ ಅರ್ಜಿಗಳು ವಿವಿಧ ಹಂತಗಳಲ್ಲಿ ಅನುಮೋದನೆಗೆ ಬಾಕಿ ಉಳಿದಿವೆ. ಈ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವಲ್ಲಿ ಕ್ರಮವಹಿಸಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.ಇ–ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರ ಅರ್ಜಿಗಳನ್ನು ಅನುಮೋದನೆ ಮಾಡುವ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿರುವ ಕಾರಣ ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<blockquote>ಬಗೆಹರಿದಿರುವ ಸಮಸ್ಯೆಗಳು: </blockquote>.<p>l ನಮೂನೆ–11 ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ</p>.<p>l ಹೊಸ ಬಹುಮಹಡಿ (ಅಪಾರ್ಟ್ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತು ಸೆಂಟ್ಸ್ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಋಣಭಾರ ಪ್ರಮಾಣಪತ್ರ (ಇಸಿ) ಗಳನ್ನು ಸಲ್ಲಿಸಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸೇವ್ ಮಾಡಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಇ-ಖಾತಾಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಇದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳೊಂದಿಗೆ ಮಾಡಲಾಗಿದ್ದ ಸಂಯೋಜನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲಾಗಿದೆ</p>.<p>l ಇ-ಸ್ವತ್ತು ತಂತ್ರಾಂಶದ ಗ್ರಾಮ ಪಂಚಾಯತಿ ಬಳಕೆದಾರರುಗಳ ಲಾಗಿನ್ ನಲ್ಲಿ ಅರ್ಜಿಗಳ ಅನುಮೋದನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ</p>.<p>ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ ದಿನದೊಳಗೆ ಕ್ರಮವಹಿಸಲಾಗುವುದು ಎಂದು ಪ್ರಿಯಾಂಕ್ ತಿಳಿಸಿದ್ದಾರೆ.</p>.<p><strong>ವಿವರಗಳಿಗೆ</strong>– https://eswathu.karnataka.gov.in/Login.aspx ಮತ್ತು https://panchatantra.karnataka.gov.in ಸಹಾಯವಾಣಿ : 9483476000</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>