<p><strong>ಬೆಂಗಳೂರು:</strong> ಸಾಮಾಜಿಕ ಪರಿವರ್ತನೆಗೆ ಶಿಕ್ಷಣವು ಅತ್ಯಂತ ಶಕ್ತಿಯುತ ಸಾಧನವಾಗಿದ್ದು, ಅದಕ್ಕಾಗಿಯೇ ಶಿಕ್ಷಣ ಕ್ಷೇತ್ರವನ್ನು ಆದ್ಯತಾ ವಲಯ ಎಂದು ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಉನ್ನತ ಶಿಕ್ಷಣ, ಕೌಶಲಾಭಿವೃದ್ಧಿ ಇಲಾಖೆ ಶುಕ್ರವಾರ ಹಮ್ಮಿಕೊಂಡಿದ್ದ ‘ಕ್ಯಾಂಪಸ್-ಟು-ಕರಿಯರ್’ ಶೃಂಗ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜ್ಞಾನ, ಕೌಶಲ ಅಭಿವೃದ್ಧಿ, ನಾವೀನ್ಯದ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾನ, ಪ್ರಗತಿಪರ ಮತ್ತು ಸದೃಢ ಸಮಾಜವನ್ನು ರೂಪಿಸುವಲ್ಲಿ ಶಿಕ್ಷಣವು ಮಹತ್ವದ ಪಾತ್ರ ವಹಿಸುತ್ತದೆ ಎನ್ನುವುದು ರಾಜ್ಯ ಸರ್ಕಾರದ ನಂಬಿಕೆ. ಪ್ರತಿ ಪದವೀಧರನಿಗೂ ಉದ್ಯೋಗ ಸಿಗಬೇಕು. ಪ್ರತಿ ಶಿಕ್ಷಣ ಸಂಸ್ಥೆಯೂ ಸಮೃದ್ಧ ಕರ್ನಾಟಕ ನಿರ್ಮಾಣದ ಗುರಿ ಹೊಂದಬೇಕು. ರಾಜ್ಯದಲ್ಲಿ ಒಂದು ಲಕ್ಷ ಜನಸಂಖ್ಯೆಗೆ 66 ಕಾಲೇಜುಗಳಿವೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ. ರಾಜ್ಯವು ₹30.7 ಲಕ್ಷ ಕೋಟಿ ಜಿಎಸ್ಡಿಪಿ ಹೊಂದಿರುವ ಆರ್ಥಿಕ ಶಕ್ತಿಯಾಗಿ ಬೆಳೆಯಲು ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಕಾರಣ’ ಎಂದು ವಿವರಿಸಿದರು.</p>.<p>ಉದ್ಯೋಗ, ಉದ್ಯಮಶೀಲತೆ, ನಾಯಕತ್ವದ ಅವಕಾಶಗಳು ಎಲ್ಲರಿಗೂ ಸಿಗಬೇಕು. ಕಾಲೇಜಿಗೆ ಪ್ರವೇಶ ಪಡೆದ ಪ್ರತಿ ವಿದ್ಯಾರ್ಥಿಗೂ ವೃತ್ತಿ ಜೀವನಕ್ಕೆ ಪೂರಕವಾದ ಪ್ರಾಯೋಗಿಕ ಕೌಶಲ ಕಲಿಸಬೇಕು. ಕರ್ನಾಟಕದ ಕೈಗಾರಿಕಾ ನೀತಿಯು ಶಿಕ್ಷಣದ ಜತೆ ಉದ್ಯೋಗವನ್ನು ಬೆಸೆಯುತ್ತದೆ. ಭವಿಷ್ಯದ ಪೀಳಿಗೆಗೆ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.</p>.<p>ಮಾಹಿತಿ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಖುಷ್ಬೂ ಚೌಧರಿ ಇದ್ದರು.</p>.<p><strong>ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆ ಶಿಕ್ಷಣ</strong> </p><p>ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಅಲ್ಪಾವಧಿ ಉದ್ಯೋಗಗಳು, ಇಂಟರ್ನ್ಶಿಪ್ ಮತ್ತು ಗಿಗ್ ಕೆಲಸದ ಅವಕಾಶ, ಹಣಕಾಸು ಸಾಕ್ಷರತೆ, ಷೇರು ಮಾರುಕಟ್ಟೆ ಮತ್ತು ಮ್ಯೂಚುವಲ್ ಫಂಡ್ ಬಗ್ಗೆ ಜ್ಞಾನ ಮೂಡಿಸುವ ಒಪ್ಪಂದಕ್ಕೆ ಟಿಂಬಕ್ಟೂ ಸಂಸ್ಥೆ ಜತೆಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಂದ ಮಾಡಿಕೊಂಡಿತು. </p><p>ಸ್ಕೌಟ್ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮತ್ತು ಬ್ರಿಟಿಷ್ ಕೌನ್ಸಿಲ್ 30 ವಿದ್ಯಾರ್ಥಿಗಳಿಗೆ ಬ್ರಿಟನ್ ವಿಶ್ವವಿದ್ಯಾಲಯದಲ್ಲಿ ಎರಡು ವಾರ ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆ, ನಗರ ಯೋಜನೆ ಹಾಗೂ ಸಂವಹನ ಕೌಶಲಗಳ ಮೇಲೆ ತರಬೇತಿ ನೀಡುವ ಒಪ್ಪಂದ ಸೇರಿದಂತೆ ವಿವಿಧ ಸಂಸ್ಥೆಗಳ ಜತೆಗೆ ಒಟ್ಟು ಆರು ಒಪ್ಪಂದ ಮಾಡಿಕೊಳ್ಳಲಾಯಿತು.</p>.<p><strong>ತಾಂತ್ರಿಕ ಶಿಕ್ಷಣ ಪಠ್ಯಕ್ರಮ ಬದಲು: ಸುಧಾಕರ್</strong> </p><p>ತಾಂತ್ರಿಕ ಶಿಕ್ಷಣದಲ್ಲಿ ಪಠ್ಯಕ್ರಮ ಬದಲಾವಣೆಯ ಅಗತ್ಯವಿದ್ದು, ಅನುಭವ ಆಧರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಎಂಜಿನಿಯರಿಂಗ್, ತಾಂತ್ರಿಕ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಹಾಗೂ ಸುರಕ್ಷತಾ ಕೋರ್ಸ್ಗಳಲ್ಲಿ ಸಮಗ್ರ ಬದಲಾವಣೆ ತರಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು. </p><p> ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸುಮಾರು ಶೇ 75ರಷ್ಟು ಬೋಧಕ ವೃಂದಕ್ಕೆ ಸಾಮರ್ಥ್ಯ ವೃದ್ಧಿ ಹಾಗೂ ತರಬೇತಿ ಕಾರ್ಯಕ್ರಮದ ಅಗತ್ಯವಿದೆ. ವಿವಿಧ ವಿಭಾಗಗಳಲ್ಲಿ ಈಗಾಗಲೇ ಗುಣಮಟ್ಟದ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಕೋರ್ಸ್ಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಅಭಿವೃದ್ಧಿಗೆ ಅಗತ್ಯವಾದ ತರಬೇತಿ ಮತ್ತು ಅನುಭವ ಒದಗಿಸಲಾಗಿದೆ. ಕೋರ್ಸ್ಗಳಿಗೆ ಪ್ರವೇಶ ಮಿತಿ ವಿಧಿಸುವ ಜತೆಗೆ ಶುಲ್ಕ ವಿನಾಯಿತಿ ಮತ್ತು ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.</p>.<div><blockquote>‘ಕ್ಯಾಂಪಸ್ ಟು ಕರಿಯರ್’ ಶೃಂಗಸಭೆಯು ಸುಭದ್ರವಾದ ಉನ್ನತ ಶಿಕ್ಷಣ, ಯುವ ಸಬಲೀಕರಣವನ್ನು ಸಾಧ್ಯವಾಗಿಸುತ್ತದೆ. ಗ್ರಾಮೀಣ, ನಗರ ವಿದ್ಯಾರ್ಥಿಗಳಿಗೆ ಉದ್ಯೋಗ ಆಧರಿತ ಶಿಕ್ಷಣವನ್ನು ಖಾತ್ರಿಪಡಿಸುತ್ತದೆ </blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-925199800</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾಮಾಜಿಕ ಪರಿವರ್ತನೆಗೆ ಶಿಕ್ಷಣವು ಅತ್ಯಂತ ಶಕ್ತಿಯುತ ಸಾಧನವಾಗಿದ್ದು, ಅದಕ್ಕಾಗಿಯೇ ಶಿಕ್ಷಣ ಕ್ಷೇತ್ರವನ್ನು ಆದ್ಯತಾ ವಲಯ ಎಂದು ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಉನ್ನತ ಶಿಕ್ಷಣ, ಕೌಶಲಾಭಿವೃದ್ಧಿ ಇಲಾಖೆ ಶುಕ್ರವಾರ ಹಮ್ಮಿಕೊಂಡಿದ್ದ ‘ಕ್ಯಾಂಪಸ್-ಟು-ಕರಿಯರ್’ ಶೃಂಗ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜ್ಞಾನ, ಕೌಶಲ ಅಭಿವೃದ್ಧಿ, ನಾವೀನ್ಯದ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾನ, ಪ್ರಗತಿಪರ ಮತ್ತು ಸದೃಢ ಸಮಾಜವನ್ನು ರೂಪಿಸುವಲ್ಲಿ ಶಿಕ್ಷಣವು ಮಹತ್ವದ ಪಾತ್ರ ವಹಿಸುತ್ತದೆ ಎನ್ನುವುದು ರಾಜ್ಯ ಸರ್ಕಾರದ ನಂಬಿಕೆ. ಪ್ರತಿ ಪದವೀಧರನಿಗೂ ಉದ್ಯೋಗ ಸಿಗಬೇಕು. ಪ್ರತಿ ಶಿಕ್ಷಣ ಸಂಸ್ಥೆಯೂ ಸಮೃದ್ಧ ಕರ್ನಾಟಕ ನಿರ್ಮಾಣದ ಗುರಿ ಹೊಂದಬೇಕು. ರಾಜ್ಯದಲ್ಲಿ ಒಂದು ಲಕ್ಷ ಜನಸಂಖ್ಯೆಗೆ 66 ಕಾಲೇಜುಗಳಿವೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ. ರಾಜ್ಯವು ₹30.7 ಲಕ್ಷ ಕೋಟಿ ಜಿಎಸ್ಡಿಪಿ ಹೊಂದಿರುವ ಆರ್ಥಿಕ ಶಕ್ತಿಯಾಗಿ ಬೆಳೆಯಲು ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಕಾರಣ’ ಎಂದು ವಿವರಿಸಿದರು.</p>.<p>ಉದ್ಯೋಗ, ಉದ್ಯಮಶೀಲತೆ, ನಾಯಕತ್ವದ ಅವಕಾಶಗಳು ಎಲ್ಲರಿಗೂ ಸಿಗಬೇಕು. ಕಾಲೇಜಿಗೆ ಪ್ರವೇಶ ಪಡೆದ ಪ್ರತಿ ವಿದ್ಯಾರ್ಥಿಗೂ ವೃತ್ತಿ ಜೀವನಕ್ಕೆ ಪೂರಕವಾದ ಪ್ರಾಯೋಗಿಕ ಕೌಶಲ ಕಲಿಸಬೇಕು. ಕರ್ನಾಟಕದ ಕೈಗಾರಿಕಾ ನೀತಿಯು ಶಿಕ್ಷಣದ ಜತೆ ಉದ್ಯೋಗವನ್ನು ಬೆಸೆಯುತ್ತದೆ. ಭವಿಷ್ಯದ ಪೀಳಿಗೆಗೆ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.</p>.<p>ಮಾಹಿತಿ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಖುಷ್ಬೂ ಚೌಧರಿ ಇದ್ದರು.</p>.<p><strong>ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆ ಶಿಕ್ಷಣ</strong> </p><p>ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಅಲ್ಪಾವಧಿ ಉದ್ಯೋಗಗಳು, ಇಂಟರ್ನ್ಶಿಪ್ ಮತ್ತು ಗಿಗ್ ಕೆಲಸದ ಅವಕಾಶ, ಹಣಕಾಸು ಸಾಕ್ಷರತೆ, ಷೇರು ಮಾರುಕಟ್ಟೆ ಮತ್ತು ಮ್ಯೂಚುವಲ್ ಫಂಡ್ ಬಗ್ಗೆ ಜ್ಞಾನ ಮೂಡಿಸುವ ಒಪ್ಪಂದಕ್ಕೆ ಟಿಂಬಕ್ಟೂ ಸಂಸ್ಥೆ ಜತೆಗೆ ಉನ್ನತ ಶಿಕ್ಷಣ ಇಲಾಖೆ ಒಪ್ಪಂದ ಮಾಡಿಕೊಂಡಿತು. </p><p>ಸ್ಕೌಟ್ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮತ್ತು ಬ್ರಿಟಿಷ್ ಕೌನ್ಸಿಲ್ 30 ವಿದ್ಯಾರ್ಥಿಗಳಿಗೆ ಬ್ರಿಟನ್ ವಿಶ್ವವಿದ್ಯಾಲಯದಲ್ಲಿ ಎರಡು ವಾರ ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆ, ನಗರ ಯೋಜನೆ ಹಾಗೂ ಸಂವಹನ ಕೌಶಲಗಳ ಮೇಲೆ ತರಬೇತಿ ನೀಡುವ ಒಪ್ಪಂದ ಸೇರಿದಂತೆ ವಿವಿಧ ಸಂಸ್ಥೆಗಳ ಜತೆಗೆ ಒಟ್ಟು ಆರು ಒಪ್ಪಂದ ಮಾಡಿಕೊಳ್ಳಲಾಯಿತು.</p>.<p><strong>ತಾಂತ್ರಿಕ ಶಿಕ್ಷಣ ಪಠ್ಯಕ್ರಮ ಬದಲು: ಸುಧಾಕರ್</strong> </p><p>ತಾಂತ್ರಿಕ ಶಿಕ್ಷಣದಲ್ಲಿ ಪಠ್ಯಕ್ರಮ ಬದಲಾವಣೆಯ ಅಗತ್ಯವಿದ್ದು, ಅನುಭವ ಆಧರಿತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಎಂಜಿನಿಯರಿಂಗ್, ತಾಂತ್ರಿಕ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಹಾಗೂ ಸುರಕ್ಷತಾ ಕೋರ್ಸ್ಗಳಲ್ಲಿ ಸಮಗ್ರ ಬದಲಾವಣೆ ತರಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಹೇಳಿದರು. </p><p> ಎಂಜಿನಿಯರಿಂಗ್ ಶಿಕ್ಷಣದಲ್ಲಿ ಸುಮಾರು ಶೇ 75ರಷ್ಟು ಬೋಧಕ ವೃಂದಕ್ಕೆ ಸಾಮರ್ಥ್ಯ ವೃದ್ಧಿ ಹಾಗೂ ತರಬೇತಿ ಕಾರ್ಯಕ್ರಮದ ಅಗತ್ಯವಿದೆ. ವಿವಿಧ ವಿಭಾಗಗಳಲ್ಲಿ ಈಗಾಗಲೇ ಗುಣಮಟ್ಟದ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಕೋರ್ಸ್ಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಅಭಿವೃದ್ಧಿಗೆ ಅಗತ್ಯವಾದ ತರಬೇತಿ ಮತ್ತು ಅನುಭವ ಒದಗಿಸಲಾಗಿದೆ. ಕೋರ್ಸ್ಗಳಿಗೆ ಪ್ರವೇಶ ಮಿತಿ ವಿಧಿಸುವ ಜತೆಗೆ ಶುಲ್ಕ ವಿನಾಯಿತಿ ಮತ್ತು ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.</p>.<div><blockquote>‘ಕ್ಯಾಂಪಸ್ ಟು ಕರಿಯರ್’ ಶೃಂಗಸಭೆಯು ಸುಭದ್ರವಾದ ಉನ್ನತ ಶಿಕ್ಷಣ, ಯುವ ಸಬಲೀಕರಣವನ್ನು ಸಾಧ್ಯವಾಗಿಸುತ್ತದೆ. ಗ್ರಾಮೀಣ, ನಗರ ವಿದ್ಯಾರ್ಥಿಗಳಿಗೆ ಉದ್ಯೋಗ ಆಧರಿತ ಶಿಕ್ಷಣವನ್ನು ಖಾತ್ರಿಪಡಿಸುತ್ತದೆ </blockquote><span class="attribution">ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-51-925199800</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>