<p>ಕಸ ವಿಲೇವಾರಿಯನ್ನು ಅತ್ಯಗತ್ಯ ಸೇವೆ ಎಂದು ಪರಿಗಣಿಸಿ ‘ಎಸ್ಮಾ’ ಕಾಯ್ದೆಯಡಿ ತರಲಾಗಿದೆ. ಗುತ್ತಿಗೆದಾರರು ಸೋಮವಾರದಂದು (ಮಾರ್ಚ್ 23), ತ್ಯಾಜ್ಯ ಸಂಗ್ರಹಿಸದೆ ತಮ್ಮ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ತೋರಿರುತ್ತಾರೆ. ಈ ಕೃತ್ಯವು ಸಾರ್ವಜನಿಕ ಆರೋಗ್ಯಕ್ಕೆ ಭಂಗ ತರುವಂತ ಹದ್ದಾಗಿದ್ದು, ‘ಎಸ್ಮಾ’ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ನಗರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿಯಲ್ಲಿ ಕರ್ತವ್ಯಲೋಪ ಎಸಗಿರುವ ಗುತ್ತಿಗೆದಾರರ ವಿರುದ್ಧ ‘ಎಸ್ಮಾ’ ಕಾಯ್ದೆಯನುಸಾರ ಕಾನೂನು ಕ್ರಮ ಜರುಗಿಸಬೇಕು’ ಎಂದು ಎಜಿಎಂಗಳು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಊರುಗಳಿಗೆ ಹೊರಟ ಕಾರ್ಮಿಕರು: ‘ಮನೆಗಳಿಂದ ಕಸ ಸಂಗ್ರಹ, ಸಾಗಣೆ ಮಾಡುವ ಕಾರ್ಮಿಕರು ರಸ್ತೆಯಲ್ಲಿ ತ್ಯಾಜ್ಯ ಆಯುವುದರಿಂದ ಸಾಕಷ್ಟು ನೊಂದಿದ್ದಾರೆ. ಹಲವು ರೀತಿಯ ರೋಗಗಳೂ ಬಂದಿವೆ. ಹೀಗಾಗಿ, ಅವರು ಕೆಲಸಕ್ಕೆ ಬರುವುದಿಲ್ಲ ಎಂದು ಹೇಳಿ ಊರುಗಳತ್ತ ಹೊರಡುತ್ತಿದ್ದಾರೆ’ ಎಂದು ಗುತ್ತಿಗೆದಾರರು ಹೇಳಿದರು.</p>.<p>‘ಕಾರ್ಮಿಕರಲ್ಲಿ ಬಹುತೇಕರು ತಮಿಳು ನಾಡು ಹಾಗೂ ಪಶ್ಚಿಮ ಬಂಗಾಳದವರು. ಆ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆ ಆಗಿರುವುದರಿಂದ, ಕಾರ್ಮಿಕರು ತಮ್ಮ ಊರುಗಳತ್ತ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ, ಕಾರ್ಮಿಕರ ಸಂಖ್ಯೆ ಸುಮಾರು ಶೇ 80ರಷ್ಟು ಕಡಿಮೆಯಾಗಿದೆ. ಉಳಿದವರು ಕಸ ಆಯುವುದಿಲ್ಲ ಎನ್ನುತ್ತಿದ್ದಾರೆ’ ಎಂದು ಗುತ್ತಿಗೆದಾರರು ತಮ್ಮ ಸಮಸ್ಯೆ ಹೇಳಿಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-4-1263478276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಸ ವಿಲೇವಾರಿಯನ್ನು ಅತ್ಯಗತ್ಯ ಸೇವೆ ಎಂದು ಪರಿಗಣಿಸಿ ‘ಎಸ್ಮಾ’ ಕಾಯ್ದೆಯಡಿ ತರಲಾಗಿದೆ. ಗುತ್ತಿಗೆದಾರರು ಸೋಮವಾರದಂದು (ಮಾರ್ಚ್ 23), ತ್ಯಾಜ್ಯ ಸಂಗ್ರಹಿಸದೆ ತಮ್ಮ ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ತೋರಿರುತ್ತಾರೆ. ಈ ಕೃತ್ಯವು ಸಾರ್ವಜನಿಕ ಆರೋಗ್ಯಕ್ಕೆ ಭಂಗ ತರುವಂತ ಹದ್ದಾಗಿದ್ದು, ‘ಎಸ್ಮಾ’ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ. ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ನಗರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿಯಲ್ಲಿ ಕರ್ತವ್ಯಲೋಪ ಎಸಗಿರುವ ಗುತ್ತಿಗೆದಾರರ ವಿರುದ್ಧ ‘ಎಸ್ಮಾ’ ಕಾಯ್ದೆಯನುಸಾರ ಕಾನೂನು ಕ್ರಮ ಜರುಗಿಸಬೇಕು’ ಎಂದು ಎಜಿಎಂಗಳು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಊರುಗಳಿಗೆ ಹೊರಟ ಕಾರ್ಮಿಕರು: ‘ಮನೆಗಳಿಂದ ಕಸ ಸಂಗ್ರಹ, ಸಾಗಣೆ ಮಾಡುವ ಕಾರ್ಮಿಕರು ರಸ್ತೆಯಲ್ಲಿ ತ್ಯಾಜ್ಯ ಆಯುವುದರಿಂದ ಸಾಕಷ್ಟು ನೊಂದಿದ್ದಾರೆ. ಹಲವು ರೀತಿಯ ರೋಗಗಳೂ ಬಂದಿವೆ. ಹೀಗಾಗಿ, ಅವರು ಕೆಲಸಕ್ಕೆ ಬರುವುದಿಲ್ಲ ಎಂದು ಹೇಳಿ ಊರುಗಳತ್ತ ಹೊರಡುತ್ತಿದ್ದಾರೆ’ ಎಂದು ಗುತ್ತಿಗೆದಾರರು ಹೇಳಿದರು.</p>.<p>‘ಕಾರ್ಮಿಕರಲ್ಲಿ ಬಹುತೇಕರು ತಮಿಳು ನಾಡು ಹಾಗೂ ಪಶ್ಚಿಮ ಬಂಗಾಳದವರು. ಆ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆ ಆಗಿರುವುದರಿಂದ, ಕಾರ್ಮಿಕರು ತಮ್ಮ ಊರುಗಳತ್ತ ಪ್ರಯಾಣಿಸುತ್ತಿದ್ದಾರೆ. ಹೀಗಾಗಿ, ಕಾರ್ಮಿಕರ ಸಂಖ್ಯೆ ಸುಮಾರು ಶೇ 80ರಷ್ಟು ಕಡಿಮೆಯಾಗಿದೆ. ಉಳಿದವರು ಕಸ ಆಯುವುದಿಲ್ಲ ಎನ್ನುತ್ತಿದ್ದಾರೆ’ ಎಂದು ಗುತ್ತಿಗೆದಾರರು ತಮ್ಮ ಸಮಸ್ಯೆ ಹೇಳಿಕೊಂಡರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-4-1263478276</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>