<p><strong>ಬೆಂಗಳೂರು:</strong> 'ಒಂದು ಕಾಲದಲ್ಲಿ ಬೆಂಗಳೂರು 'ಜಾಗತಿಕ ಸಾಮರ್ಥ್ಯ ಕೇಂದ್ರ'ಗಳ (ಜಿಸಿಸಿ) ಪೈಕಿ ಮುಂಚೂಣಿಯಲ್ಲಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬೆಂಗಳೂರು 'ಜಾಗತಿಕ ಭ್ರಷ್ಟಾಚಾರ ಕೇಂದ್ರ'ಗಳಲ್ಲಿ ಮುನ್ನಡೆಯಲ್ಲಿದೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. </p><p>ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಪಟ್ಟಿಯಲ್ಲಿ ಬೆಂಗಳೂರನ್ನು ಹಿಂದಿಕ್ಕಿರುವ ಹೈದರಾಬಾದ್ ಅಗ್ರಸ್ಥಾನಕ್ಕೇರಿದೆ ಎಂಬುದಕ್ಕೆ ಸಂಬಂಧಿಸಿದಂತೆ ವರದಿಯನ್ನು ಹಂಚಿಕೊಂಡಿರುವ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>'ರಾಜ್ಯದ ಪ್ರತಿಯೊಂದು ಇಲಾಖೆ, ಸಚಿವಾಲಯವು ಭ್ರಷ್ಟಾಚಾರದಿಂದ ತುಂಬಿಕೊಂಡಿದೆ. ಗುಂಡಿ ಮಚ್ಚುವ ಕಾರ್ಯ, ಕಸ ಗುಡಿಸುವ ಯಂತ್ರಗಳಲ್ಲಿ ₹600 ಕೋಟಿ ಹಗರಣ ಮತ್ತು ನಗರದಾದ್ಯಂತ ಮೂಲಸೌಕರ್ಯದ ಸ್ಥಿತಿ ಶೋಚನೀಯವಾಗಿದೆ' ಎಂದು ಅವರು ಆರೋಪಿಸಿದ್ದಾರೆ. </p><p>'ಇತರೆ ರಾಜ್ಯಗಳನ್ನು ಆಯ್ಕೆ ಮಾಡಿದ್ದಕ್ಕಾಗಿ ಕಾರ್ಪೊರೇಟರ್ಗಳನ್ನು ರಾಜ್ಯ ಸರ್ಕಾರ ಅಪಹಾಸ್ಯ ಮಾಡುತ್ತಿದೆ. ಈಶಾನ್ಯ ರಾಜ್ಯಗಳ ನಾಗರಿಕರ ವಿರುದ್ಧ ಜನಾಂಗೀಯ ನಿಂದನೆ ಮಾಡಲು ಹಿಂಜರಿಯುವುದಿಲ್ಲ. ಇಡೀ ಸಮಸ್ಯೆಗೆ ರಾಜ್ಯ ನಾಯಕರ ಅಸಮರ್ಥತೆ ಹಾಗೂ ಭ್ರಷ್ಟಾಚಾರವು ಮೂಲ ಕಾರಣ ಎಂಬುದನ್ನು ಮರೆತಂತಿದೆ' ಎಂದು ಟೀಕಿಸಿದ್ದಾರೆ. </p>.ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿಕೆಶಿ.ನನ್ನ ಅಧಿಕಾರ ಈಗಲೂ, ಭವಿಷ್ಯದಲ್ಲೂ ಭದ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ಒಂದು ಕಾಲದಲ್ಲಿ ಬೆಂಗಳೂರು 'ಜಾಗತಿಕ ಸಾಮರ್ಥ್ಯ ಕೇಂದ್ರ'ಗಳ (ಜಿಸಿಸಿ) ಪೈಕಿ ಮುಂಚೂಣಿಯಲ್ಲಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬೆಂಗಳೂರು 'ಜಾಗತಿಕ ಭ್ರಷ್ಟಾಚಾರ ಕೇಂದ್ರ'ಗಳಲ್ಲಿ ಮುನ್ನಡೆಯಲ್ಲಿದೆ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. </p><p>ಭಾರತದ ಜಾಗತಿಕ ಸಾಮರ್ಥ್ಯ ಕೇಂದ್ರಗಳ (ಜಿಸಿಸಿ) ಪಟ್ಟಿಯಲ್ಲಿ ಬೆಂಗಳೂರನ್ನು ಹಿಂದಿಕ್ಕಿರುವ ಹೈದರಾಬಾದ್ ಅಗ್ರಸ್ಥಾನಕ್ಕೇರಿದೆ ಎಂಬುದಕ್ಕೆ ಸಂಬಂಧಿಸಿದಂತೆ ವರದಿಯನ್ನು ಹಂಚಿಕೊಂಡಿರುವ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. </p><p>'ರಾಜ್ಯದ ಪ್ರತಿಯೊಂದು ಇಲಾಖೆ, ಸಚಿವಾಲಯವು ಭ್ರಷ್ಟಾಚಾರದಿಂದ ತುಂಬಿಕೊಂಡಿದೆ. ಗುಂಡಿ ಮಚ್ಚುವ ಕಾರ್ಯ, ಕಸ ಗುಡಿಸುವ ಯಂತ್ರಗಳಲ್ಲಿ ₹600 ಕೋಟಿ ಹಗರಣ ಮತ್ತು ನಗರದಾದ್ಯಂತ ಮೂಲಸೌಕರ್ಯದ ಸ್ಥಿತಿ ಶೋಚನೀಯವಾಗಿದೆ' ಎಂದು ಅವರು ಆರೋಪಿಸಿದ್ದಾರೆ. </p><p>'ಇತರೆ ರಾಜ್ಯಗಳನ್ನು ಆಯ್ಕೆ ಮಾಡಿದ್ದಕ್ಕಾಗಿ ಕಾರ್ಪೊರೇಟರ್ಗಳನ್ನು ರಾಜ್ಯ ಸರ್ಕಾರ ಅಪಹಾಸ್ಯ ಮಾಡುತ್ತಿದೆ. ಈಶಾನ್ಯ ರಾಜ್ಯಗಳ ನಾಗರಿಕರ ವಿರುದ್ಧ ಜನಾಂಗೀಯ ನಿಂದನೆ ಮಾಡಲು ಹಿಂಜರಿಯುವುದಿಲ್ಲ. ಇಡೀ ಸಮಸ್ಯೆಗೆ ರಾಜ್ಯ ನಾಯಕರ ಅಸಮರ್ಥತೆ ಹಾಗೂ ಭ್ರಷ್ಟಾಚಾರವು ಮೂಲ ಕಾರಣ ಎಂಬುದನ್ನು ಮರೆತಂತಿದೆ' ಎಂದು ಟೀಕಿಸಿದ್ದಾರೆ. </p>.ಎಲ್ಲ 140 ಮಂದಿ ಶಾಸಕರೂ ನನ್ನವರೇ, ಗುಂಪುಗಾರಿಕೆ ನನ್ನ ರಕ್ತದಲ್ಲಿಲ್ಲ: ಡಿಕೆಶಿ.ನನ್ನ ಅಧಿಕಾರ ಈಗಲೂ, ಭವಿಷ್ಯದಲ್ಲೂ ಭದ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>