<p><strong>ಬೆಂಗಳೂರು:</strong> ವಿಶೇಷ ರಿಯಾಯಿತಿ ಮತ್ತು ಉತ್ತೇಜನ ಸವಲತ್ತುಗಳನ್ನು ಪಡೆದುಕೊಂಡು ಹೂಡಿಕೆ ಮಾಡುವ ಕಂಪನಿಗಳು, ಸ್ಥಳೀಯರಿಗೇ ಹೆಚ್ಚಿನ ಉದ್ಯೋಗಗಳನ್ನು ನೀಡಬೇಕು ಎಂಬುದರ ಬಗ್ಗೆ ಹೂಡಿಕೆ ಉತ್ತೇಜನ ಮತ್ತು ರಿಯಾಯಿತಿ ಮಂಜೂರು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚೆಯಾಗಿದೆ.</p>.<p>ವಿಧಾಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ 13 ವಿವಿಧ ಕಂಪನಿಗಳು ಕೇಳಿರುವ ರಿಯಾಯಿತಿ ಮತ್ತು ವಿನಾಯಿತಿ ಪ್ರಸ್ತಾವಗಳ ಬಗ್ಗೆ ಚರ್ಚೆಯಾಗಿದೆ. ಈ ಕಂಪನಿಗಳು ತೆರಿಗೆ, ಭೂಮಿ, ಮತ್ತಿತರ ಶುಲ್ಕಗಳಲ್ಲಿ ಶೇ 40ರವರೆಗೂ ರಿಯಾಯಿತಿ ಕೇಳಿವೆ. ಅದನ್ನು ಶೇ 25– ಶೇ 30ರಷ್ಟಕ್ಕೆ ತರಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಕಂಪನಿಗಳು ಹೆಚ್ಚಿನ ಪ್ರಮಾಣದ ವಿನಾಯಿತಿ ಕೇಳಿದ್ದರೂ, ಹೂಡಿಕೆಯಿಂದ ರಾಜ್ಯಕ್ಕಾಗುವ ಲಾಭವನ್ನು ಪರಿಗಣಿಸಿ ಅವುಗಳ ಪ್ರಸ್ತಾವಗಳನ್ನು ಕಾಯ್ದಿರಿಸಲಾಗಿದೆ. ಆದರೆ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒತ್ತಿ ಹೇಳಿದರು ಎಂದು ತಿಳಿಸಿವೆ.</p>.<p>ಸಚಿವರಾದ ಕೆ.ಜೆ.ಜಾರ್ಜ್, ಎಂ.ಬಿ. ಪಾಟೀಲ, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ, ಎನ್.ಎಸ್.ಬೋಸರಾಜ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-4-245866029</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಶೇಷ ರಿಯಾಯಿತಿ ಮತ್ತು ಉತ್ತೇಜನ ಸವಲತ್ತುಗಳನ್ನು ಪಡೆದುಕೊಂಡು ಹೂಡಿಕೆ ಮಾಡುವ ಕಂಪನಿಗಳು, ಸ್ಥಳೀಯರಿಗೇ ಹೆಚ್ಚಿನ ಉದ್ಯೋಗಗಳನ್ನು ನೀಡಬೇಕು ಎಂಬುದರ ಬಗ್ಗೆ ಹೂಡಿಕೆ ಉತ್ತೇಜನ ಮತ್ತು ರಿಯಾಯಿತಿ ಮಂಜೂರು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚೆಯಾಗಿದೆ.</p>.<p>ವಿಧಾಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ 13 ವಿವಿಧ ಕಂಪನಿಗಳು ಕೇಳಿರುವ ರಿಯಾಯಿತಿ ಮತ್ತು ವಿನಾಯಿತಿ ಪ್ರಸ್ತಾವಗಳ ಬಗ್ಗೆ ಚರ್ಚೆಯಾಗಿದೆ. ಈ ಕಂಪನಿಗಳು ತೆರಿಗೆ, ಭೂಮಿ, ಮತ್ತಿತರ ಶುಲ್ಕಗಳಲ್ಲಿ ಶೇ 40ರವರೆಗೂ ರಿಯಾಯಿತಿ ಕೇಳಿವೆ. ಅದನ್ನು ಶೇ 25– ಶೇ 30ರಷ್ಟಕ್ಕೆ ತರಲು ಸಾಧ್ಯವೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಕಂಪನಿಗಳು ಹೆಚ್ಚಿನ ಪ್ರಮಾಣದ ವಿನಾಯಿತಿ ಕೇಳಿದ್ದರೂ, ಹೂಡಿಕೆಯಿಂದ ರಾಜ್ಯಕ್ಕಾಗುವ ಲಾಭವನ್ನು ಪರಿಗಣಿಸಿ ಅವುಗಳ ಪ್ರಸ್ತಾವಗಳನ್ನು ಕಾಯ್ದಿರಿಸಲಾಗಿದೆ. ಆದರೆ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಗಳು ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒತ್ತಿ ಹೇಳಿದರು ಎಂದು ತಿಳಿಸಿವೆ.</p>.<p>ಸಚಿವರಾದ ಕೆ.ಜೆ.ಜಾರ್ಜ್, ಎಂ.ಬಿ. ಪಾಟೀಲ, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ, ಎನ್.ಎಸ್.ಬೋಸರಾಜ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಹೇಳಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-4-245866029</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>