<p><strong>ಬೆಂಗಳೂರು:</strong> ‘ಪಕ್ಷಕ್ಕೆ ಲೆಟರ್ಹೆಡ್, ವಿಸಿಟಿಂಗ್ ಕಾರ್ಡ್ ಜಿಲ್ಲಾ ಘಟಕದ ಅಧ್ಯಕ್ಷರ ಅವಶ್ಯಕತೆ ಇಲ್ಲ. ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುವವರಿಗಷ್ಟೇ ಆ ಹುದ್ದೆಗಳನ್ನು ನೀಡುತ್ತೇವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷರ ಸಭೆಯನ್ನು ಪಕ್ಷದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಸಭೆಯಲ್ಲಿ ಅವರು ಕೆಲ ಪದಾಧಿಕಾರಿಗಳನ್ನು ಅವರು ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ಹೇಳಿವೆ.</p>.<p>‘ಕೆಲವು ಜಿಲ್ಲೆಗಳಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದರೂ, ಮುಖಂಡರ ವರ್ತನೆಯ ಕಾರಣಕ್ಕೆ ಪಕ್ಷಕ್ಕೆ ಹಿನ್ನಡೆಆಗುತ್ತಿದೆ. ಈ ಬಗ್ಗೆ ಹಲವು ದೂರುಗಳು ಬಂದಿವೆ. ಪಕ್ಷದ ಪ್ರಮುಖರ ಸಮಿತಿಯ ಸಭೆಗೆ ಕೆಲವು ಜಿಲ್ಲಾ ಘಟಕದ ಅಧ್ಯಕ್ಷರು ಹಾಜರಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಯಾರೇ ಆಗಿದ್ದರೂ ಎರಡು–ಮೂರು ಸಭೆಗಳಿಗೆ ಗೈರು ಹಾಜರಾದರೆ, ಅವರನ್ನು ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ’ ಎಂದಿವೆ.</p>.<p>‘ರಾಜ್ಯ ರಾಜಕಾರಣದಲ್ಲಿ ಮುಂದಿನ ಎರಡು ವರ್ಷ ಅತ್ಯಂತ ಮಹತ್ವದ್ದಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗಾಗಿ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಪಕ್ಷದ ಹುದ್ದೆಯ ಹೆಸರಿನಲ್ಲಿ ಶೋಕಿ ಮಾಡುವವರಿಂದ ಈ ಕೆಲಸ ಸಾಧ್ಯವಿಲ್ಲ. ಅಂತಹವರು ಪಕ್ಷಕ್ಕೆ ಬೇಕಾಗಿಯೂ ಇಲ್ಲ. ಸಕ್ರಿಯವಾಗಿ ಮತ್ತು ನಿಷ್ಠೆಯಿಂದ ಪಕ್ಷ ಸಂಘಟನೆ ಮಾಡುವವರಷ್ಟೇ ಪಕ್ಷದಲ್ಲಿ ಉಳಿಯುತ್ತಾರೆ ಎಂದೂ ಎಚ್ಚರಿಸಿದರು’ ಎಂದು ಮೂಲಗಳು ಹೇಳಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-4-2082709775</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪಕ್ಷಕ್ಕೆ ಲೆಟರ್ಹೆಡ್, ವಿಸಿಟಿಂಗ್ ಕಾರ್ಡ್ ಜಿಲ್ಲಾ ಘಟಕದ ಅಧ್ಯಕ್ಷರ ಅವಶ್ಯಕತೆ ಇಲ್ಲ. ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುವವರಿಗಷ್ಟೇ ಆ ಹುದ್ದೆಗಳನ್ನು ನೀಡುತ್ತೇವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರಿಗೆ ಎಚ್ಚರಿಕೆ ನೀಡಿದ್ದಾರೆ.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷರ ಸಭೆಯನ್ನು ಪಕ್ಷದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಸಭೆಯಲ್ಲಿ ಅವರು ಕೆಲ ಪದಾಧಿಕಾರಿಗಳನ್ನು ಅವರು ತರಾಟೆಗೆ ತೆಗೆದುಕೊಂಡರು ಎಂದು ಮೂಲಗಳು ಹೇಳಿವೆ.</p>.<p>‘ಕೆಲವು ಜಿಲ್ಲೆಗಳಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದರೂ, ಮುಖಂಡರ ವರ್ತನೆಯ ಕಾರಣಕ್ಕೆ ಪಕ್ಷಕ್ಕೆ ಹಿನ್ನಡೆಆಗುತ್ತಿದೆ. ಈ ಬಗ್ಗೆ ಹಲವು ದೂರುಗಳು ಬಂದಿವೆ. ಪಕ್ಷದ ಪ್ರಮುಖರ ಸಮಿತಿಯ ಸಭೆಗೆ ಕೆಲವು ಜಿಲ್ಲಾ ಘಟಕದ ಅಧ್ಯಕ್ಷರು ಹಾಜರಾಗುತ್ತಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಯಾರೇ ಆಗಿದ್ದರೂ ಎರಡು–ಮೂರು ಸಭೆಗಳಿಗೆ ಗೈರು ಹಾಜರಾದರೆ, ಅವರನ್ನು ಹುದ್ದೆಯಿಂದ ತೆರವು ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ’ ಎಂದಿವೆ.</p>.<p>‘ರಾಜ್ಯ ರಾಜಕಾರಣದಲ್ಲಿ ಮುಂದಿನ ಎರಡು ವರ್ಷ ಅತ್ಯಂತ ಮಹತ್ವದ್ದಾಗಿದೆ. ಮುಂದಿನ ವಿಧಾನಸಭಾ ಚುನಾವಣೆಗಾಗಿ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಪಕ್ಷದ ಹುದ್ದೆಯ ಹೆಸರಿನಲ್ಲಿ ಶೋಕಿ ಮಾಡುವವರಿಂದ ಈ ಕೆಲಸ ಸಾಧ್ಯವಿಲ್ಲ. ಅಂತಹವರು ಪಕ್ಷಕ್ಕೆ ಬೇಕಾಗಿಯೂ ಇಲ್ಲ. ಸಕ್ರಿಯವಾಗಿ ಮತ್ತು ನಿಷ್ಠೆಯಿಂದ ಪಕ್ಷ ಸಂಘಟನೆ ಮಾಡುವವರಷ್ಟೇ ಪಕ್ಷದಲ್ಲಿ ಉಳಿಯುತ್ತಾರೆ ಎಂದೂ ಎಚ್ಚರಿಸಿದರು’ ಎಂದು ಮೂಲಗಳು ಹೇಳಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-4-2082709775</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>